ತುಮಕೂರು : ಜಮೀನಿನಲ್ಲಿ ದಾರಿ ಬಿಡುವ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದ ಘಟನೆ ತುಮಕೂರು ತಾಲೂಕಿನ ಕಟ್ಟೆಗೊಲ್ಲಹಳ್ಳಿಯಲ್ಲಿ ಜರುಗಿದೆ.
ಘಟನೆಯಲ್ಲಿ ಪರಸ್ಪರ ಜುಟ್ಟು ಹಿಡಿದು ಮಹಿಳೆಯರು ಕೈಯಲ್ಲಿ ಮಚ್ಚು ಹಿಡಿದು ಬಡಿದಾಡಿಕೊಂಡಿದ್ದಾರೆ. ಆಸ್ತಿ ವಿಚಾರದಲ್ಲಿ ದಾಯಾದಿಗಳ ನಡುವೆ ನಡೆದ ಗಲಾಟೆ ನಡೆದಿದೆ.
ಸರ್ಕಾರಿ ಉದ್ಯೋಗಿ ರವೀಶ್ ಕುಟುಂಬದಿಂದ ಗಲಾಟೆ ನಡೆದಿದೆ. ರವೀಶ್, ಪತ್ನಿ ರುದ್ರಾಣಮ್ಮ ಮಗ ರೋಹಿತ್ ನಿಂದ ಹಲ್ಲೆ ಆರೋಪ ಕೇಳಿ ಬಂದಿದೆ. ನಾಗರಾಜಯ್ಯ ಕುಟುಂಬದ ಮೇಲೆ ರವೀಶ್ ಕುಟುಂಬದವರಿಂದ ಹಲ್ಲೆ ನಡೆದಿದೆ.
16 ಎಕರೆ ಆಸ್ತಿ ಪ್ರಕರಣ ಕೋರ್ಟ್ ನಲ್ಲಿರುವ ನಡುವೆಯೂ ಗಲಾಟೆ ನಡೆದಿದ್ದು, ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.