ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮೆರೆಯುತ್ತಿದೆ. ಈ ನಿಟ್ಟಿನಲ್ಲಿ ಅನಗತ್ಯ ವೆಚ್ಚ ಕಡಿಮೆ ಮಾಡಲಿ. ಅನಗತ್ಯ ಹುದ್ದೆಗಳಿಗೆ ಕಡಿವಾಣ ಹಾಕಿ. ಅಭಿವೃದ್ಧಿ ಕೆಲಸ ಈಗ ನಿಲ್ಲಿಸಿ ಎಂದು ಸರ್ಕಾರಕ್ಕೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರಿಗೆ ಅಕ್ಕಿ ಕೊಡಲು 20-30 ಕೋಟಿ ಮೀಸಲಿಡಲಿ. ಬಿಪಿಎಲ್ ಕಾರ್ಡ್ ದಾರರಿಗೆ ಹಣ ಕೊಡಲಿ. ಜೇಬಿನಲ್ಲಿ ದುಡ್ಡು ಇದ್ದರೆ ಮಾತ್ರ ಮಾರುಕಟ್ಟೆಗೆ ಹೋಗಿ ಹಣ್ಣು ತರಕಾರಿ ತರಬಹುದು. ಹೀಗಾಗಿ ಮೊದಲು ಅವರ ಜೇಬಿಗೆ ದುಡ್ಡು ಹಾಕಲಿ. ಇನ್ನು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಹೋಗಬೇಕು. ಅಲ್ಲಿ ಅಧಿಕಾರಿಗಳ ಜತೆ ಸಭೆ ಮಾಡಬೇಕು. ಅಚ್ಚರಿ ಭೇಟಿ ಮಾಡಬೇಕು ಎಂದು ತಿಳಿಸಿದರು.
ಪಂಚ ರಾಜ್ಯಗಳ ಚುನಾವಣೆಯಲ್ಲಿ ಅಸ್ಸಾಂ ಮತ್ತು ಕೇರಳದಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ ಜೊತೆಗೆ ತಮಿಳುನಾಡು ಮತ್ತು ಪಾಂಡಿಚೇರಿಯಲ್ಲಿಯೂ ಕಾಂಗ್ರೆಸ್ ಒಕ್ಕೂಟಕ್ಕೆ ಗೆಲುವು ಸಿಗುವುದುದು ಖಚಿತ ಎಂದರು.
ರಾಜ್ಯದಲ್ಲಿ ಮೂರು ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಯಲ್ಲಿಯೂ ಕಾಂಗ್ರೆಸ್ ಗೆಲ್ಲುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.