ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ ಸಂಭವಿಸಿದ 24 ಸಾವು ಪ್ರಕರಣದ ಹಿನ್ನೆಲೆಯಲ್ಲಿ ಚಾಮರಾಜನಗರ ಮತ್ತು ಮೈಸೂರು ಜಿಲ್ಲಾಧಿಕಾರಿಗಳ ಕಚೇರಿಯ ದಾಖಲೆಗಳನ್ನು ಸೀಜ್ ಮಾಡುವಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಚಾಮಗರಾಜನಗರ ದುರಂತದ ಹಿನ್ನೆಲೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದ ಮುಖ್ಯ ನ್ಯಾಯಮೂರ್ತಿ ಎ.ಕೆ. ಓಕಾ ನೇತೃತ್ವದ ಪೀಠ, ಆಕ್ಸಿಜನ್ ಸರಬರಾಜು ಕುರಿತ ಎಲ್ಲಾ ದಾಖಲೆಗಳನ್ನು ಸೀಜ್ ಮಾಡಲು ಆದೇಶಿಸಿದೆ.
ಪ್ರಕರಣದ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಿದ ಹೈಕೋರ್ಟ್, ತನಿಖೆಯ ನೇತೃತ್ವ ವಹಿಸುವ ಮುಖ್ಯ ನ್ಯಾಯಮೂರ್ತಿಯನ್ನು ಸರಕಾರ ನೇಮಕ ಮಾಡಬಾರದು. ಈ ಜವಾಬ್ದಾರಿಯನ್ನು ನಾವೇ ನೋಡಿಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿತು.
ಈ ವೇಳೆ ಸರಕಾರದ ಪರ ವಕೀಲರು, ನಿವತ್ತ ನ್ಯಾಯಮೂರ್ತಿಯನ್ನು ಈಗಾಗಲೇ ನಿಗದಿಪಡಿಸಲಾಗಿದೆ ಎಂಬ ಹೇಳಿಕೆಗೆ ಅಸಮಾಧಾನ ವ್ಯಕ್ತಪಡಿಸಿದ ಇದನ್ನು ನಾವು ನೋಡಿಕೊಳ್ಳುತ್ತೇವೆ. ನೀವು ಚಾ.ನಗರ ಮತ್ತು ಮೈಸೂರು ಜಿಲ್ಲಾಧಿಕಾರಿ ಕಚೇರಿಗಳ ದಾಖಲೆ ಮೊದಲು ಸೀಜ್ ಮಾಡಿಸಿ. ಈ ದಾಖಲೆಗಳನ್ನು ವಿಚಾರಣಾಧೀಕಾರಿ ಪರಿಶೀಲಿಸುತ್ತಾರೆ ಎಂದು ಹೇಳಿದೆ.