ಉಚಿತ ಆರೋಗ್ಯ ಮೇಳಗಳ ಸದುಪಯೋಗಕ್ಕೆ ಅಬಕಾರಿ ಸಚಿವ ಕೆ.ಗೋಪಾಲಯ್ಯ ಕರೆ

ಉಚಿತ ಆರೋಗ್ಯ ತಪಾಸಣಾ ಶಿಬಿರಗಳ ಉಪಯೋಗವನ್ನು ಪ್ರತಿಯೊಬ್ಬರೂ ಸದುಪಯೋಗ ಪಡಿಸಿಕೊಳ್ಳಬೇಕೆಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಕರೆ ನೀಡಿದರು.

ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರಾಮಕೃಷ್ಣ ನಗರದ ಪ್ರಸನ್ನ ಗಣಪತಿ ಟ್ರಸ್ಟ್ ನಲ್ಲಿಂದು ಮಹಾಲಕ್ಷ್ಮಿ ಎಜುಕೇಷನ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಉಚಿತ ಆರೋಗ್ಯ ಮೇಳಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರದ ಜನರ ಆರೋಗ್ಯ ಮತ್ತು ಮಕ್ಕಳ ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಲಾಗಿದೆ.  ಇದನ್ನೂ ಓದಿ : – ಪಕ್ಷದ ವರಿಷ್ಠರು ಯಾವುದೇ ತೀರ್ಮಾನ ತೆಗೆದುಕೊಂಡ್ರು ಸಂತೋಷದಿಂದ ಸ್ವೀಕಾರ ಮಾಡುತ್ತೇವೆ – ಲಕ್ಷ್ಮಣ್ ಸವದಿ

ನೀವಷ್ಟೇ ಅಲ್ಲದೆ ದೂರದ ಊರಿನಲ್ಲಿರುವ ನಿಮ್ಮ ಬಂಧುಗಳು, ಸ್ನೇಹಿತರು, ಹಿತೈಷಿಗಳಿಗೂ ಇಂಥಹ ಶಿಬಿರಗಳ ಬಗ್ಗೆ ತಿಳಿಸಿ ಅವರು ಕೂಡ ಇದರ ಉಪಯೋಗಪಡೆಯಲು ಸಹಕಾರ ನೀಡಿ ಎಂದರು. ಕಣ್ಣು, ಹೃದಯ, ಶ್ವಾಸಕೋಶ, ಗರ್ಭಕೋಶ, ರಕ್ತದೊತ್ತಡ, ಸಕ್ಕರೆ ಖಾಯಿಲೆಗಳಿಗೆ ಉಚಿತ ತಪಾಸಣೆ ಮತ್ತು ಔಷಧಿಗಳನ್ನು ನೀಡಲಾಗುತ್ತಿದೆ. ಕಣ್ಣಿನ ತೊಂದರೆ ಇರುವವರಿಗೆ ಶಸ್ತ್ರಚಿಕಿತ್ಸೆ ಮಾಡಿ ಕನ್ನಡಕಗಳನ್ನೂ ಕೂಡ ನೀಡಲಾಗುವುದು. ಇದನ್ನೂ ಓದಿ : –  ಕಾಶ್ಮೀರಿ ಪಂಡಿತರ ಹತ್ಯೆಗಿಂತ ಸಿನಿಮಾ ಬಗ್ಗೆ ಮಾತಾಡೋದು ಪ್ರಧಾನಿಗೆ ಮುಖ್ಯವಾಗಿದೆ – ರಾಹುಲ್

ಜನರ ಉತ್ತಮ ಆರೋಗ್ಯಕ್ಕಾಗಿ ಪ್ರತಿ ತಿಂಗಳು ಕ್ಷೇತ್ರದ ಹಲವೆಡೆ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಿ ಔಷಧಿಗಳನ್ನು ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವವರಿಗೆ ಇತರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಕೂಲ ಮಾಡಿಕೊಡಲಾಗುತ್ತಿದ್ದು, ಪ್ರತಿಯೊಬ್ಬರೂ ಇದರ ಉಪಯೋಗಪಡೆದುಕೊಳ್ಳಬೇಕೆಂದು ಕರೆ ನೀಡಿದ್ರು.

ಈ ಸಂದರ್ಭದಲ್ಲಿ ಮಹಾಲಕ್ಷ್ಮಿ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಜಯರಾಮಯ್ಯ,ವಾರ್ಡ್ ಅಧ್ಯಕ್ಷ ಲೋಕೇಶ್, ಶಿವಾನಂದ ಮೂರ್ತಿ, ವೆಂಕಟೇಶ್, ವೆಂಕಟೇಶಮೂರ್ತಿ, ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

 ಇದನ್ನೂ ಓದಿ : – ಎರಡು ದಿನದಲ್ಲಿ ಕೇಂದ್ರ ನಾಯಕರನ್ನ ಸಂಪರ್ಕಿಸಿ ಸಂಪುಟ ವಿಸ್ತರಣೆ ಅಂತಿಮ ಗೊಳಿಸುವೆ – ಸಿಎಂ ಬೊಮ್ಮಾಯಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!