ತುಮಕೂರಿನ ಎಂಪ್ರೆಸ್ ಸರ್ಕಾರಿ ಶಾಲೆಯಲ್ಲಿ ನಡೆದ ಶೈಕ್ಷಣಿಕ ವರ್ಷದ ಕಲಿಕಾ ಚೇತರಿಕೆ ವರ್ಷದ ಕಾರ್ಯಕ್ರಮಕ್ಕೆ ದೀಪ ಬೆಳಗುವ ಮೂಲಕ ಸಿಎಂ ಬೊಮ್ಮಾಯಿ ಚಾಲನೆ ನೀಡಿದರು.
ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ರೂಪಿಸಿರುವ ಕಾರ್ಯಕ್ರಮ ಇದಾಗಿದೆ. ಎರಡು ವರ್ಷದಿಂದ ಕೊರೋನಾ ಕಾರಣಕ್ಕೆ ಶೈಕ್ಷಣಿಕ ಚಟುವಟಿಕೆಯಲ್ಲಿ ಕುಂಠಿತವಾಗಿತ್ತು. ಶೈಕ್ಷಣಿಕ ಚಟುವಟಿಕೆಗೆ ಉತ್ತೇಜನ ನೀಡಲು ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ದೇಶದಲ್ಲೇ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ಕಾರ್ಯಕ್ರಮ ಅನುಷ್ಠಾನವಾಗಿದೆ. ಇದನ್ನೂ ಓದಿ : – ಬುದ್ದ ಪೌರ್ಣಮಿ ಹಿನ್ನಲೆ – ನೇಪಾಳದ ಲುಂಬಿನಿಗೆ ಪ್ರಧಾನಿ ಮೋದಿ ಭೇಟಿ
ಕಲಿಕಾ ಹಿನ್ನಡೆ ಕುರಿತು ಕೇಂದ್ರ ಮತ್ತು ರಾಜ್ಯ ಶಿಕ್ಷಣ ಇಲಾಖೆ ಸಮೀಕ್ಷೆ ನಡೆಸಿತ್ತು. ಸಚಿವರಾದ ಅರಗ ಜ್ಞಾನೇಂದ್ರ, ಬಿ.ಸಿ ನಾಗೇಶ್, ಸಂಸದ ಜಿ.ಎಸ್ ಬಸವರಾಜು, ಶಾಸಕರಾದ ಜ್ಯೋತಿ ಗಣೇಶ್, ಚಿದಾನಂದ್, ವೈ.ಎ ನಾರಾಯಣಸ್ವಾಮಿ ಇತರರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ : – ರಾಯಚೂರಿನಲ್ಲಿ ಇಂದಿನಿಂದ ಜೂನ್ 1 ರವರೆಗೂ ಕಲಿಕಾ ಚೇತರಿಕೆ ಕಾರ್ಯಕ್ರಮ