ರಾಜಧಾನಿ ಬೆಂಗಳೂರು ಮೇ ಮಳೆಗೆ ಜರ್ಝರಿತವಾಗಿದೆ. ನಗರದಲ್ಲಿ ಭಾರೀ ಪ್ರಮಾಣದಲ್ಲಿ ಸುರಿದ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುತ್ತಿರುವ ಹಿನ್ನೆಲೆಯಲ್ಲಿ ರಾಜಕಾಲುವೆಯ ಅಕ್ಕಪಕ್ಕದಲ್ಲಿರುವ ಮನೆಗಳ ತೆರವಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ( BASAVARAJ BOMMAI ) ತಿಳಿಸಿದ್ದಾರೆ.
ಬೆಂಗಳೂರು ನಗರ ಪ್ರದಕ್ಷಿಣೆ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ಮುಖ್ಯ ಕಾಲುವೆಗಿಂತ ಕೆಳಗಡೆ ಮನೆ ಕಟ್ಟಿದಾಗಲೂ ಈ ಸಮಸ್ಯೆ ಆಗುತ್ತಿದೆ. ಅಕ್ರಮವಾಗಿ ಕಟ್ಟಡಗಳಿಂದಲೂ ಸಮಸ್ಯೆ ಆಗುತ್ತಿದೆ.ಈ ನಿಟ್ಟಿನಲ್ಲಿ ತೆರವಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು. ಸಿಟಿ ರೌಂಡ್ಸ್ ಮೂಲಕ ಎಲ್ಲ ಕಡೆ ಭೇಟಿ ನೀಡಿದ್ದೇನೆ. ಈ ಬಾರಿ ಅಲ್ಪ ಅವಧಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆ ಬಿದ್ದಿದೆ. ಇಷ್ಟು ಪ್ರಮಾಣದಲ್ಲಿ ಮಳೆ ಬಂದಿರುವುದರಿಂದ ಬಹಳಷ್ಟು ಜನರಿಗೆ ತೊಂದರೆ ಆಗಿದೆ. ಒಂದು ಲೆಕ್ಕಾಚಾರ ಪ್ರಕಾರ ಮೇ ತಿಂಗಳಲ್ಲಿ 15 ದಿನಗಳಲ್ಲಿ ಆಗಬೇಕಾದ ಮಳೆ ನಾಲ್ಕೈದು ತಾಸಲ್ಲಿ ಆಗಿದೆ. ಇದರಿಂದ ಸಮಸ್ಯೆ ಉಂಟಾಗಿದೆ ಎಂದು ತಿಳಿಸಿದರು.
ಮಳೆ ನೀರು ನುಗ್ಗಿದ ಪರಿಣಾಮ ಸಮಸ್ಯೆಗೆ ಒಳಗಾಗಿರುವ ಸಂತ್ರಸ್ತರಿಗೆ ಒಂದು ವಾರದ ರೇಷನ್ ಹಾಗೂ ಊಟದ ವ್ಯವಸ್ಥೆ ಮಾಡಲು ಹೇಳಲಾಗಿದೆ. ಕಾಲುವೆಗಳನ್ನು ದುರಸ್ತಿ ಮಾಡುವುದಕ್ಕೆ 1600 ಕೋಟಿ ಬಿಡುಗಡೆ ಮಾಡಲಾಗಿದೆ. ಇದಕ್ಕೆ ಡಿಪಿಆರ್ ಮಾಡಿ ಕೆಲಸ ಪ್ರಾರಂಭ ಮಾಡುತ್ತೇವೆ ಎಂದು ಸಿಎಂ ತಿಳಿಸಿದರು. ಎಲ್ಲೆಲ್ಲಿ ಹೂಳು ತುಂಬಿದೆ ಅದನ್ನು ನಿವಾರಣೆ ಮಾಡುವುದಕ್ಕೆ ಅನುಮತಿ ಕೊಟ್ಟಿದ್ದೇವೆ. ಡಿಸಿಲ್ಟಿಂಗ್ ಕೆಲಸ ಆಗಬೇಕಿದೆ. ರಾಜಕಾಲುವೆ ಪಕ್ಕದ ವಾರ್ಡ್ ಗಳಲ್ಲಿ ಕೆಲಸ ತಕ್ಷಣ ಪ್ರಾರಂಭ ಮಾಡಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ : – ಶೀನಾ ಬೋರಾ ಹತ್ಯೆ ಪ್ರಕರಣ – ಇಂದ್ರಾಣಿ ಮುಖರ್ಜಿಗೆ ಬಿಡುಗಡೆ ಭಾಗ್ಯ
ವೃಷಭಾವತಿ ವ್ಯಾಲಿಯಲ್ಲಿ ದೊಡ್ಡ ಕಲ್ಲುಗಳಿಂದ ನೀರು ತಡೆ ಹಿಡಿಯುತ್ತಿದೆ. ನೀರು ಸರಾಗವಾಗಿ ಹರಿಯುವಂತೆ ವ್ಯವಸ್ಥೆ ಮಾಡಲು ಸೂಚನೆ ನೀಡಲಾಗಿದೆ. ಇದನ್ನು ತುರ್ತಾಗಿ ಮಾಡಲು ಸೂಚನೆ ನೀಡಲಾಗಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.ಬೆಂಗಳೂರು ನಗರ ಅಭಿವೃದ್ಧಿ ಆಗುತ್ತಿದೆ. ಆದರೆ ಪ್ರವಾಹದ ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ. ಎಸ್.ಟಿ.ಪಿ ಪ್ಲ್ಯಾಂಟ್ ಪ್ರಮಾಣ ಹೆಚ್ಚಳಕ್ಕೆ ಸೂಚನೆ ನೀಡಲಾಗಿದೆ. 100 ಎಲ್ಎಂಡಿ ಜತೆಗೆ ಹೊಸ 60 ಎಂಎಲ್ ಡಿ ಪ್ಲ್ಯಾಂಟ್ ಹಾಕಲು ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಇದನ್ನೂ ಓದಿ : – SSLC – ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ – ವಿದ್ಯಾರ್ಥಿನಿಯರೇ ಮೇಲುಗೈ