ಗಾಳಿ ಸಹಿತ ಭಾರೀ ಮಳೆಯಿಂದಾಗಿ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ನಿರ್ಗಮನ ಮತ್ತು ಆಗಮನದ ಮೇಲೆ ಪರಿಣಾಮ ಬೀರಿದೆ. ಇಂದು ಮುಂಜಾನೆ ಸುರಿದ ಭಾರೀ ಮಳೆಯಿಂದಾಗಿ ಹವಾಮಾನ ವೈಪರಿತ್ಯ ಉಂಟಾಗಿತ್ತು.
ಈ ಹಿನ್ನೆಲೆಯಲ್ಲಿ ಹಲವಾರು ವಿಮಾನಯಾನ ಸಂಸ್ಥೆಗಳು ವಿಮಾನ ನಿಲ್ದಾಣಕ್ಕೆ ಹೋಗುವ ಮೊದಲು ತಮ್ಮ ವಿಮಾನದ ಸ್ಥಿತಿಯನ್ನು ಪರಿಶೀಲಿಸಲು ಪ್ರಯಾಣಿಕರಲ್ಲಿ ವಿನಂತಿಸಿದ್ದಾರೆ. ನವೀಕರಿಸಿದ ವಿಮಾನ ಮಾಹಿತಿಗಾಗಿ ಸಂಬಂಧಿಸಿದ ವಿಮಾನಯಾನ ಸಂಸ್ಥೆಯನ್ನು ಸಂಪರ್ಕಿಸಲು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ :- ಜಲಾಶಯವನ್ನ ಹತ್ತಲು ಹೋಗಿ ಎಡವಟ್ಟು ಮಾಡಿಕೊಂಡ ಯುವಕ
ವಿಮಾನಯಾನ ಕಂಪನಿಗಳು ಟ್ವೀಟ್ ಮಾಡಿ, ದೆಹಲಿಯಲ್ಲಿ ಹವಾಮಾನ ವಿಕೋಪದ ಪರಿಣಾಮದಿಂದಾಗಿ ವಿಮಾನ ನಿಲ್ದಾಣದಲ್ಲಿ ನಿರ್ಗಮನ ಮತ್ತು ಆಗಮನದ ಮೇಲೆ ಪರಿಣಾಮ ಬೀರಬಹುದು. ಇದರಿಂದಾಗಿ ತಮ್ಮ ವಿಮಾನದ ಸ್ಥಿತಿಯನ್ನು ಪರಿಶೀಲಿಸಲು ತಮ್ಮ ಪ್ರಯಾಣಿಕರನ್ನು ವಿನಂತಿಸಿದ್ದಾರೆ. ಈ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಟ್ವೀಟ್ ಮಾಡಿ, ಮುಂದಿನ 2 ಗಂಟೆಗಳ ಕಾಲ ದೆಹಲಿಯಲ್ಲಿ ಸಾಧಾರಣ ಮಳೆಯೊಂದಿಗೆ ಗುಡುಗು ಸಹಿತ ಮಳೆ ಮುಂದುವರಿಯಲಿದೆ ಎಂದು ಹೇಳಿದೆ.
ಇದನ್ನೂ ಓದಿ :- ಇಂದಿನಿಂದ ಕ್ವಾಡ್ ಶೃಂಗಸಭೆ- ಟೋಕಿಯೋದಲ್ಲಿ ಮೋದಿಗೆ ಆತ್ಮೀಯ ಸ್ವಾಗತ