ಬೆಂಗಳೂರಿನ ಮಾರ್ಥಸ್ ಆಸ್ಪತ್ರೆಯಲ್ಲಿ ಬೆಳ್ಳಂಬೆಳಗ್ಗೆ ನಿರ್ಮಾಣ ಹಂತದ ಮೇಲ್ಛಾವಣಿ ಕುಸಿದು ಕಾರ್ಮಿಕರಿಬ್ಬರು ಮೃತಪಟ್ಟಿರುವ ಶಂಕೆ ವ್ಯಕ್ತವಾಗುತ್ತಿದೆ.
ಬೆಂಗಳೂರಿನ ಮಾರ್ಥಸ್ ಆಸ್ಪತ್ರೆ ನವೀಕರಣ ಕಾಮಗಾರಿ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಬೆಳಗ್ಗೆಯೇ ಬಂದ ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದರು. ಆದರೆ ಕೆಲಸ ಮಾಡುತ್ತಿರುವಾಗ ಮೇಲ್ಛಾವಣಿ ಕುಸಿದಿದ್ದು, ಇಬ್ಬರನ್ನು ಈಗಾಗಲೇ ರಕ್ಷಿಸಲಾಗಿದೆ. ಮತ್ತಿಬ್ಬರಿಗಾಗಿ ಹುಡುಕಾಡುತ್ತಿದ್ದಾರೆ. ಘಟನೆಯಲ್ಲಿ ರಪೀಸಾಬ್, ಬಸವರಾಜು ಇಬ್ಬರು ಕಾರ್ಮಿಕರು ಮೇಲ್ಚಾವಣಿ ಕೆಳಗೆ ಸಿಲುಕಿದ್ದಾರೆ. ಇದನ್ನೂ ಓದಿ : – ಯುಪಿಎಸ್ ಸಿ ಪರೀಕ್ಷಾ ಫಲಿತಾಂಶ ಪ್ರಕಟ – ಹೊಸಪೇಟೆ ಮೂಲದ ಡಾ. ಅಪೂರ್ವ ಬಸೂರ್ 191 ನೇ ರಾಂಕ್
ರಾಯಚೂರು ಮೂಲದ ಇಬ್ಬರು ಕಾರ್ಮಿಕರಾಗಿದ್ದಾರೆ. ನಿರ್ಮಾಣ ಹಂತದ ಮೇಲ್ಛಾವಣಿ ಕುಸಿತದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯ ಪೊಲೀಸರು ಆಗಮಿಸಿದ್ದು, ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.
ಇದನ್ನೂ ಓದಿ : – ವಿಜಯನಗರದ ಸ್ಮಯೋರ್ ಕಾರ್ಖಾನೆಗೆ ಭೂಮಿ ನೀಡಿ ಮೋಸಹೋದ ರೈತ – ಕಾರ್ಖಾನೆ ಬಳಿ ಪ್ರತಿಭಟನೆ