ವಿಜಯನಗರ ( vijayanagar ) ಜಿಲ್ಲೆಯಲ್ಲಿ ಗುಡುಗು, ಗಾಳಿ ಸಹಿತ ವರುಣನ ಆರ್ಭಟ ಮುಂದುವರೆದಿದೆ. ಹೊಸಪೇಟೆ, ವಡಕರಾಯ ದೇಗುಲ, ಪುನೀತ್ ಪುತ್ಥಳಿ, ಕಮಲಾಪೂರ ಸೇರಿ ಹಲೆವೆಡೆ ಮಳೆಯ ಅಬ್ಬರ ಮುಂದುವರೆದಿದೆ.
ಸಂಜೆ ವೇಳೆ ಸುರಿದ ಮಳೆಗೆ ಮನೆಗೆ ತೆರಳುತ್ತಿದ್ದ ಸವಾರರು ಪರದಾಡುವಂತಾಗಿದೆ. ಏಕಾಏಕಿ ಸುರಿದ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇದನ್ನು ಓದಿ : – ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ. ಸಿ. ಮಂಜುನಾಥ್ ಸೇವಾವಧಿ ವಿಸ್ತರಣೆ
ಇನ್ನೂ ಹಾವೇರಿ (haveri) ಜಿಲ್ಲೆ ಸವಣೂರು ತಾಲೂಕಿನ ಕುಣಿಮೆಳ್ಳಿಹಳ್ಳಿ, ಹಲಸೂರು, ಹಾನಗಲ್ ತಾಲೂಕಿನ ಹರವಿ, ಕೂಡಲ, ಹಾವೇರಿ ತಾಲೂಕಿನ ವರದಹಳ್ಳಿ, ನಾಗನೂರು ಸೇರಿದಂತೆ ಹಲವು ಗ್ರಾಮಗಳ ರೈತರ ಜಮೀನುಗಳು ಜಲಾವೃತಗೊಂಡಿವೆ. ಜಮೀನಿನಲ್ಲಿ ಬೆಳೆದಿದ್ದ ಸುಗಂಧಿ ಹೂವು, ಗಲಾಟೆ ಹೂವು, ಮೆಕ್ಕೆಜೋಳ, ಕಬ್ಬು, ಹೂಕೋಸು ಸೇರಿದಂತೆ ಹಲವು ಬೆಳೆಗಳು ಸಂಪೂರ್ಣ ಜಲಾವೃತಗೊಂಡಿವೆ.
ಇದನ್ನು ಓದಿ : – ಪ್ರಜಾಸತ್ತಾತ್ಮಕ ಜವಾಬ್ದಾರಿ ಮೆರೆದ ಮಾಜಿ ಪ್ರಧಾನಿಗಳು – ವ್ಹೀಲ್ ಚೇರ್ ನಲ್ಲಿ ಆಗಮಿಸಿ ಮತ ಚಲಾಯಿಸಿದ ಮನ್ ಮೋಹನ್ ಸಿಂಗ್, ದೇವೇಗೌಡರು