ಈ ಸರ್ಕಾರದಲ್ಲಿ ಯುವಕರಿಗೆ ನೌಕರಿ ಬೇಕೆಂದರೆ ಲಂಚ ಕೊಡಬೇಕು, ಯುವತಿಯರು ಮಂಚ ಹತ್ತಬೇಕು. ಇದು ಲಂಚ-ಮಂಚದ ಸರ್ಕಾರ ಎಂದು ಕಾಂಗ್ರೆಸ್ ನಾಯಕ ಶಾಸಕ ಪ್ರಿಯಾಂಕ್ ಖರ್ಗೆ ( priyanka kharge ) ರಾಜ್ಯ ಬಿಜೆಪಿ ( bjp ) ಸರ್ಕಾರವನ್ನು ಕಟುವಾಗಿ ಟೀಕಿಸಿದ್ದಾರೆ.
ಸರಕಾರ ಯುವಕರಿಗೆ ಉದ್ಯೋಗ ಕೊಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಯುವಕರ ಭವಿಷ್ಯದ ಜೊತೆಗೆ ಇವರು ಚೆಲ್ಲಾಟವಾಡುತ್ತಿದ್ದಾರೆ. ಈ ಸರ್ಕಾರದಲ್ಲಿ ಪ್ರತಿಯೊಂದು ಹುದ್ದೆಗಳು ಮಾರಾಟಕ್ಕಿದೆ. ಹಣ ಕೊಟ್ಟರೆ ಬಿಜೆಪಿ ಸರ್ಕಾರ ಏನು ಬೇಕಾದರೂ ಮಾಡಲು ಸಿದ್ಧ. ಈ ಸರ್ಕಾರದ ಮೇಲೆ ಯುವಕರು ನಂಬಿಕೆ ಕಳೆದುಕೊಂಡಿದ್ದಾರೆ ಎಂದರು. ಇದನ್ನೂ ಓದಿ : – 2,500 ಅಡಿ ಉದ್ದದ ತಿರಂಗಾ ವಾಕಥಾನ್ ಗೆ ಸುಧಾಕರ್ ಚಾಲನೆ
ಮಂತ್ರಿ ಮಂಡಲದ ಮೇಲೆ ಸಿಎಂಗೆ ಹಿಡಿತವಿಲ್ಲ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ಗೆ ಬಿಜೆಪಿ ಅವರ ಮೇಲೆ ಹಿಡಿತ ಇಲ್ಲ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಬಿಜೆಪಿ ಅವರೇ ಬೆಂಕಿ ಹಚ್ಚುತ್ತಿದ್ದಾರೆ. ನಾವು ಬೆಂಕಿ ಹತ್ತಿದೆ ಅಂತಾ ಹೇಳಿದರೆ ನಮ್ಮ ಮೇಲೆ ಗೂಬೆ ಕೂರಿಸುತ್ತಿದ್ದಾರೆ ಎಂದರು.
ದುಡ್ಡು ಕೊಡದಿದ್ದರೆ ಈ ಸರ್ಕಾರದಲ್ಲಿ ಯಾವ ಕೆಲಸವೂ ನಡೆಯುವುದಿಲ್ಲ. ರಾಜ್ಯ ಮತ್ತು ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಚ್ಚಾಗಿದೆ. ಕಳೆದ ಮೂರು ವರ್ಷಗಳಲ್ಲಿ ಉದ್ಯೋಗ ಸೃಷ್ಟಿಯಲ್ಲಿ ಸರ್ಕಾರದ್ದು ಶೂನ್ಯ ಸಾಧನೆ ಎಂದರು. ಹಿಂದೆ ಇಬ್ಬರು ಮಂತ್ರಿಗಳು ಈ ವಿವಾದದಲ್ಲಿ ರಾಜೀನಾಮೆ ನೀಡಿದ್ದಾರೆ. ಈ 40 ಪರ್ಸೆಂಟ್ ಸರ್ಕಾರ ಯುವಕರ ವಿರೋಧಿ ಸರ್ಕಾರವಾಗಿದೆ. 8 ವರ್ಷದ ಹಿಂದೆ ಮೋದಿಯವರು ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಹೇಳಿದ್ದರು. ಆದರೆ ಸರ್ಕಾರದ ಅಂಕಿಅಂಶವೇ ಉದ್ಯೋಗ ಸೃಷ್ಟಿಯಾಗುತ್ತಿಲ್ಲ ಎಂದು ತೋರಿಸಿದೆ ಎಂದು ವಾಗ್ದಾಳಿ ನಡೆಸಿದ್ರು.
ಇದನ್ನೂ ಓದಿ : – ಗಾಯಕ ಸುಬ್ಬಣ್ಣ ಅಗಲಿಕೆಗೆ ಸಂತಾಪ ಸೂಚಿಸಿದ ಆರ್.ಅಶೋಕ್