ಬಳ್ಳಾರಿ ( balleri ) ಯ ವಿಮ್ಸ್ ನಲ್ಲಿ ಆದ ದುರ್ಘಟನೆಗಳ ಕುರಿತು ತಡವಾಗಿಯಾದರೂ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ( k. sudhakar ) ಎಚ್ಚೆತ್ತುಕೊಂಡಿದ್ದಾರೆ. ಇಂದು ಬೆಳಿಗ್ಗೆ ವಿಮ್ಸ್ ಗೆ ಭೇಟಿ ನೀಡಿದ ಅವರು ಅಧಿಕಾರಿಗಳ ಸಭೆ ನಡೆಸಿ ಸಮಗ್ರ ಮಾಹಿತಿ ಪಡೆದಿದ್ದಾರೆ.
ಸುಧಾಕರ್ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ( sri ramulu ) ಸಾಥ್ ನೀಡಿದ್ರು. ಸಭೆ ವೇಳೆ ವಿಮ್ಸ್ ನಿರ್ದೇಶಕ ಡಾ.ಗಂಗಾಧರ ಗೌಡ, ಡಿಸಿ ಪವನಕುಮಾರ್ ಮಾಲಪಾಟಿ ಸೇರಿದಂತೆ ಹಲವರಿಗೆ ಸಚಿವ ಸುಧಾಕರ್ ಕ್ಲಾಸ್ ತೆಗೆದುಕೊಂಡ್ರು ಎನ್ನುವ ಮಾತುಗಳು ಕೇಳಿಬಂದಿವೆ.
ಇನ್ನು ಸಭೆ ಬಳಿಕ ಡಾ.ಕೆ ಸುಧಾಕರ್ ಕೇಬಲ್ ಬ್ಲಾಸ್ಟ್ ಆಗಿದ್ದ ಸ್ಥಳ ನೋಡಿದ್ರು. ಹಾಗೆಯೇ ಸಮಸ್ಯೆ ಉಂಟಾಗಿದ್ದ ಐಸಿಯುಗೂ ತೆರಳಿ ಸ್ಥಳ ಪರಿಶೀಲನೆ ಜೊತೆ, ವಾಸ್ತವ ಪರಿಸ್ಥಿತಿಯ ಪರಿಶೀಲನೆ ಮಾಡಿದ್ರು. ನಂತರ ಅವರು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ್ರು. ಅದರಲ್ಲಿಯೂ ಸಹ ಅವರು ಸರ್ಕಾರದ್ದು ಯಾವುದೇ ಬಗೆಯ ತಪ್ಪಿಲ್ಲ. ಮೃತಪಟ್ಟಿರೋದು ಇಬ್ಬರೇ ಎನ್ನುವ ದಾಟಿಯಲ್ಲಿ ಮಾತನಾಡಿದ್ರು. ವಿಮ್ಸ್ ಆಸ್ಪತ್ರೆಯಲ್ಲಿ ನಡೆದ ಘಟನೆಯಲ್ಲಿ ಎರಡು ಸಾವು ಬಗ್ಗೆ ವರದಿಯಾಗಿದೆ. ಆರೋಗ್ಯ ಸಮಸ್ಯೆಯಿಂದ ನಾನು ಸದನಕ್ಕೆ ಹೋಗಿರಲಿಲ್ಲ. ನನ್ನ ಪರವಾಗಿ ಸಚಿವ ಶ್ರೀರಾಮುಲು ಸದನದಲ್ಲಿ ಉತ್ತರ ಕೊಟ್ಟಿದ್ದಾರೆ. ಸತ್ಯವನ್ನು ಮುಚ್ಚಿಡಲು ಸಾಧ್ಯವಾಗುವುದಿಲ್ಲ. ರಾಜ್ಯದ ಜನರಿಗೆ ಸತ್ಯ ಗೊತ್ತಾಗಬೇಕು ಅನ್ನೋದು ನಮ್ಮ ಉದ್ದೇಶವಾಗಿದ್ದು, ಈ ಬಗ್ಗೆ ತನಿಖೆ ನಡೆಸಲು ಉನ್ನತ ಮಟ್ಟದ ತನಿಖೆ ಸಮಿತಿ ಮಾಡಿದ್ದೇವೆ. ತನಿಖಾ ಸಮಿತಿ ಕೂಡ ವಿಮ್ಸ್ ಗೆ ಭೇಟಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ವಿದ್ಯುತ್ ಸ್ಥಗಿತವಾದ ವೇಳೆಯಲ್ಲಿ ಇಬ್ವರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ : – ಕೋಲಾರ JDS ಅಲ್ಪಸಂಖ್ಯಾತ ಸಮಾವೇಶದಲ್ಲಿ ವೇದಿಕೆಯಲ್ಲೆ ಕಣ್ಣೀರಾಕಿದ ರಾಜೇಶ್ವರಿ
ಈ ಬಗ್ಗೆ ವೈದ್ಯಾಧಿಕಾರಿಗಳು ದಾಖಲೆ ನೀಡಿದ್ದು, ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ವ್ಯಕ್ತಿಗೆ ಉಸಿರಾಟದ ಸಮಸ್ಯೆ ಇತ್ತು, ಮೆದುಳಿನಲ್ಲಿ ರಕ್ತಸ್ರಾವ ಆಗಿದೆ.ಬಿಪಿ ಕೂಡ ಹೆಚ್ಚಾಗಿದೆ, ರೋಗಿಯ ಸ್ಥಿತಿಯ ಸಂಬಂಧಿಕರೊಂದಿಗೆ ವೈದ್ಯಾಧಿಕಾರಿಗಳು ಮಾತನಾಡಿದ್ದಾರೆ ಎಂದರು. ಸೆ 14 ರಂದು 9.45 ಕ್ಕೆ ಆ ವ್ಯಕ್ತಿ ಸಾವನ್ನಪ್ಪಿದ್ದಾರೆ. ಸಾವಿಗೆ ಕಾರಣ ಬಗ್ಗೆ ನಾನು ಈಗಲೇ ಹೇಳುವುದಿಲ್ಲ. ಈಗಾಗಲೇ ಈ ಬಗ್ಗೆ ಉನ್ನತ ಮಟ್ಟದ ಸಮಿತಿ ತನಿಖೆ ನಡೆಯುತ್ತಿದೆ. 30 ವರ್ಷದ ಮಹಿಳೆ ಹಾವು ಕಚ್ಚಿದ್ದರಿಂದ ಸೆ 13 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಎಲ್ಲಾ ರೀತಿಯ ಚಿಕಿತ್ಸೆ ನೀಡಲಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕಾರ್ಡಿಯಾಕ್ ಅರೆಸ್ಟ್ ನಿಂದ ಮೃತಪಟ್ಟಿದ್ದಾರೆ. ಇದರ ಹೊರತಾಗಿಯೂ ಎಲ್ಲಾ ವಿಭಾಗದ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ್ದು, ತನಿಖಾ ವರದಿ ಬಂದ ಬಳಿಕ ಸದನದ ಮುಂದೆ ರಾಜ್ಯದ ಜನರ ಮುಂದೆ ವರದಿ ನೀಡುತ್ತೇವೆ. ತನಿಖೆ ಬಳಿಕ ವರದಿಯಲ್ಲಿ ಯಾರದ್ದಾದರೂ ನಿರ್ಲಕ್ಷ್ಯ ಕಂಡು ಬಂದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಿರ್ದೇಶಕರ ವಿರುದ್ದ ಷಡ್ಯಂತ್ರ ನಡೆದಿದ್ರೆ ಈ ಬಗ್ಗೆ ತನಿಖಾ ಸಮಿತಿ ತನಿಖೆ ನಡೆಸಲಿದೆ ಎಂದರು.
ಇದನ್ನೂ ಓದಿ : – ಮೈಸೂರಿನಲ್ಲಿ ಸಾಹಸಸಿಂಹ ದಿ. ವಿಷ್ಣು ವರ್ಧನ್ ಹುಟ್ಟುಹಬ್ಬದ ಸಂಭ್ರಮ