ಇಂದಿನಿಂದ ರಾಜಧಾನಿಯಲ್ಲಿ ಮತ್ತೆ ಬಿಬಿಎಂಪಿ ( bbmp ) ಬುಲ್ಡೋಜರ್ ಗಳು ಘರ್ಜಿಸಲಿವೆ. ಇವತ್ತು ಬಡವರ ಒತ್ತುವರಿ ತೆರವು ಮಾಡುತ್ತಾ ಅಥವಾ ಪ್ರಭಾವಿಗಳ ಒತ್ತುವರಿಗೆ ಜೆಸಿಬಿ ನುಗ್ಗುತ್ತಾ ಎನ್ನುವುದೇ ಎಲ್ಲರ ಪ್ರಶ್ನೆ ಆಗಿದೆ. ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದ ರೈನ್ ಬೋ ಲೇಔಟ್ ವಿಲ್ಲಾಗಳಿಗೆ ಒತ್ತುವರಿ ತೆರವುಗೊಳಿಸುವಂತೆ ತಹಶೀಲ್ದಾರ್ ನೋಟಿಸ್ ನೀಡಿ 7 ದಿನ ಕಳೆದಿದೆ.
ಒಂದು ವೇಳೆ ಈ ಅವಧಿಯಲ್ಲಿ ಒತ್ತುವರಿ ಜಾಗವನ್ನು ತೆರವು ಮಾಡದಿದಿದ್ದರೆ ನಾವೇ ಮಾಡುತ್ತೇವೆ. ತೆರವು ಕಾರ್ಯಾಚರಣೆ ವೆಚ್ಚ ನೀವೇ ಭರಿಸಬೇಕು ಎಂದು 15ಕ್ಕೂ ಹೆಚ್ಚು ವಿಲ್ಲಾಗಳಿಗೆ ತಹಶೀಲ್ದಾರ್ ನೋಟಿಸ್ ಜಾರಿಗೊಳಿಸಿದ್ದರು. ಇನ್ನು ರೈನ್ ಬೋ ಡ್ರೈವ್ ( rain bowlayout ) ಲೇಔಟ್ ನಲ್ಲಿ ಜಿಲ್ಲಾಡಳಿತ ನಡೆಸಿದ ಸರ್ವೆಯಲ್ಲಿ ಕಾಲುವೆ ಒತ್ತುವರಿ ಮಾಡಿ ವಿಲ್ಲಾಗಳನ್ನ ನಿರ್ಮಿಸಿರುವುದು ಬಹಿರಂಗವಾಗಿತ್ತು. ಸೆಪ್ಟೆಂಬರ್ 1 ರಿಂದ ಈವರೆಗೆ 110 ಕಡೆ ಒತ್ತುವರಿಯನ್ನು ತೆರವು ಮಾಡಲಾಗಿದೆ. ಇದರ ಮಧ್ಯೆ, ಒತ್ತುವರಿ ಮಾಡಿರುವವರ ಹೆಸರಿನ ಪಟ್ಟಿಯನ್ನು ಕಂದಾಯ ಸಚಿವ ಆರ್.ಅಶೋಕ್ ವಿಧಾನಸೌಧದಲ್ಲಿ ಬಿಡುಗಡೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಆ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳು ಇರುತ್ತವೆ ಎಂಬುದು ಕೂಡ ಕುತೂಹಲ ಮೂಡಿಸಿದೆ.
ಇದನ್ನೂ ಓದಿ : – ಇಂದು ಬ್ರಿಟನ್ ಮಹಾರಾಣಿ ಎಲಿಜಬೆತ್ ಅಂತ್ಯಕ್ರಿಯೆ – ವಿಶ್ವದ ಹಲವು ಗಣ್ಯರು ಭಾಗಿ