ಐಸಿಸಿ ( ICC ) ಪುರುಷರ ಟಿ-20 ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾದಲ್ಲಿ ವೇಗಿ ಜಸ್ಪ್ರೀತ್ ಬೂಮ್ರಾ ಬದಲಿಗೆ ಮೊಹಮ್ಮದ್ ಶಮಿ ಅವರನ್ನು ಅಖಾಡಕ್ಕಿಳಿಸಲು ನಿರ್ಧರಿಸಲಾಗಿದೆ. ಅಖಿಲ ಭಾರತ ಹಿರಿಯ ಆಯ್ಕೆದಾರರ ಸಮಿತಿ ಆಯ್ಕೆ ಮಾಡಿರುವುದಾಗಿ ಬಿಸಿಸಿಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಜಸ್ಪ್ರೀತ್ ಬೂಮ್ರಾ ಗಾಯಗೊಂಡಿರುವುದರಿಂದ ರೋಹಿತ್ ಶರ್ಮಾ ನೇತೃತ್ವದಲ್ಲಿ 14 ಆಟಗಾರರನ್ನೊಳಗೊಂಡ ತಂಡ ವಿಶ್ವಕಪ್ ಗಾಗಿ ಆಸ್ಟ್ರೇಲಿಯಾಕ್ಕೆ ಪ್ರಯಾಣಿಸಿದೆ. ಈ ಕುರಿತು ಬಿಸಿಸಿಐ ವೆಬ್ ಸೈಟ್ ನಲ್ಲಿ ಮಾಹಿತಿ ನೀಡಲಾಗಿದೆ. ಇದನ್ನೂ ಓದಿ :- ಟಿ20 ವಿಶ್ವಕಪ್ – ದೀಪಕ್ ಚಹರ್ ಕೂಡ ಟೂರ್ನಿಯಿಂದ ಔಟ್ ಸಿರಾಜ್, ಶಾರ್ದೂಲ್, ಶಮಿಗೆ ಮಣೆ!
ಮೊಹಮ್ಮದ್ ಶಮಿ ಆಸ್ಟ್ರೇಲಿಯಾಕ್ಕೆ ತೆರಳಲಿದ್ದು, ಟೀ ಇಂಡಿಯಾ ಸೇರಲಿದ್ದಾರೆ. ಮೊಹಮ್ಮದ್ ಸಿರಾಜ್ ಮತ್ತು ಶಾರ್ದೂಲ್ ಠಾಕೂರ್ ಬ್ಯಾಕ್ ಆಪ್ ಆಟಗಾರರಾಗಿ ಶೀಘ್ರದಲ್ಲೇ ಆಸ್ಟ್ರೇಲಿಯಾಕ್ಕೆ ತೆರಳಲಿದ್ದಾರೆ ಎಂದು ಹೇಳಲಾಗಿದೆ. ಟೀಂ ಇಂಡಿಯಾ – ರೋಹಿತ್ ಶರ್ಮಾ( ನಾಯಕ) ಕೆಎಲ್ ರಾಹುಲ್ ( ಉಪ ನಾಯಕ) ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್) ದಿನೇಶ್ ಕಾರ್ತಿಕ್ ( ವಿಕೆಟ್ ಕೀಪರ್) ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯಜುವೇಂದ್ರ ಚಹಲ್, ಅಕ್ಸರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅಶ್ರದೀಪ್ ಸಿಂಗ್, ಮೊಹಮ್ಮದ್ ಶಮಿ
ಇದನ್ನೂ ಓದಿ :- ಬಿಜೆಪಿ ಸೇರಲು ನಿರಾಕರಿಸಿದ್ದರಿಂದ ಗಂಗೂಲಿಗೆ 2ನೇ ಬಾರಿಗೆ BCCI ಸ್ಥಾನ ಕೈತಪ್ಪಿತಾ…?