ಒಕ್ಕಲಿಗ ಸಮುದಾಯಕ್ಕೂ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಬೇಕು ಎಂಬ ಕೂಗು ಕೇಳಿ ಬರುತ್ತಿದೆ. ನಮ್ಮ ಸಮುದಾಯಕ್ಕೆ ನ್ಯಾಯ ಕೊಡಿಸುವುದು ನಮ್ಮ ಹೊಣೆಯಾಗಿದೆ. ಸಮಯ ಬಂದರೆ ನ್ಯಾಯದ ತಕ್ಕಡಿ ಹಿಡಿದು ಹೋಗುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ( C.T RAVI ) ಭರವಸೆ ನೀಡಿದ್ದಾರೆ.
ಸರ್ಕಾರದ ಮೀಸಲಾತಿ ದುರ್ಬಲ ವರ್ಗಗಳಿಗೆ ಸಿಗಬೇಕು. ಕಾಲಕಾಲಕ್ಕೆ ಮೀಸಲಾತಿ ಹಂಚಿಕೆ ಮಾರ್ಪಾಡು ಆಗಬೇಕು. ಮೀಸಲಾತಿ ನ್ಯಾಯಯುತವಾಗಿ ಪರಿಶೀಲನೆ ಮಾಡಬೇಕು. ನ್ಯಾಯಸಿಗದ ವರ್ಗಕ್ಕೆ ಮೀಸಲಾತಿ ನೀಡುವ ಕೆಲಸ ಆಗಬೇಕು ಎಂದರು. ಎಸ್ಸಿ, ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿದ್ದೇವೆ. ಮೀಸಲಾತಿ ಬಹಳ ಸೂಕ್ಷ್ಮ ವಿಚಾರವಾಗಿದೆ. ರಾಜಕಾರಣದಲ್ಲಿ ಸಾಂದರ್ಭಿಕವಾಗಿ ಹೇಳುವುದು ತಪ್ಪಾಗುತ್ತದೆ. ಮೀಸಲಾತಿ ದುರ್ಬಲರ ಪರವಾಗಿ ಇರಬೇಕು. ನಾನು ನಮ್ಮ ಸಮುದಾಯದ ನಿರ್ಮಲಾನಂದ ಸ್ವಾಮೀಜಿ ಪರವಾಗಿಯೇ ಹೇಳಬೇಕು, ಇಲ್ಲ ಅಂದರೂ ಅದು ತಪ್ಪಾಗುತ್ತದೆ. ಆ ವಿಚಾರವೇ ಬೇಡ ಬಿಡಿ ಎಂದು ಜಾರಿಕೊಂಡರು. ಬೇರೆ ಬೇರೆ ಸಣ್ಣ, ಬಡ ಸಮುದಾಯ ಇದೆ ಅವರಿಗೆ ಮೀಸಲಾತಿ ಸಿಗಲಿ. ಬಿಜೆಪಿ ಎಲ್ಲರನ್ನೂ ಪ್ರತಿನಿಧಿಸುವ ಪಕ್ಷವಾಗಿದೆ. ಮೀಸಲಾತಿಯನ್ನು ನ್ಯಾಯಯುತವಾಗಿ ಪರಿಶೀಲನೆ ಮಾಡಬೇಕು. ಯಾವ ವರ್ಗಕ್ಕೆ ನ್ಯಾಯ ಸಿಕ್ಕಿಲ್ಲವೋ ಅವರಿಗೆ ಕೊಡುವ ಕೆಲಸ ಮಾಡಬೇಕು. ಎಸ್.ಸಿ, ಎಸ್.ಟಿ. ಸಮುದಾಯಕ್ಕೆ ನ್ಯಾಯ ಕೊಡಬೇಕು ಅಂತಲೇ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಸಣ್ಣ ಸಮುದಾಯಗಳಿಗೆ ಧ್ವನಿ ಕೊಟ್ಟು ನ್ಯಾಯ ಕೊಡಿಸುವ ಕೆಲಸ ಮಾಡಬೇಕು ಎಂದು ಹೇಳಿದರು.
ಒಕ್ಕಲಿಗ ಸಮುದಾಯ ಮೀಸಲಾತಿ ಪ್ರಮಾಣ ಹೆಚ್ಚಳ ಕುರಿತು ಬೀದಿಗಿಳಿದರೇ, ಅವರಿಗೆ ಬೆಂಬಲಿಸುವ ವಿಚಾರ ಬಂದಾಗ ನೋಡೋಣ. ಸಮಯ ಬಂದರೆ ನ್ಯಾಯದ ತಕ್ಕಡಿ ಹಿಡಿದೇ ಹೋಗೋದು. ಯಾವುದೇ ಸಮುದಾಯಕ್ಕೆ ಅನ್ಯಾಯ ಆಗದಂತೆ ಹಾಗೂ ನಮ್ಮ ಸಮುದಾಯಕ್ಕೆ ನ್ಯಾಯ ಕೊಡಿಸೋದೇ ನಮ್ಮ ಹೊಣೆ ಎಂದು ಹೇಳಿದ್ದಾರೆ.
ಟೆಕ್ನಾಲಜಿ ಬಳಸಿಕೊಂಡು ನಗರದಲ್ಲಿನ ರಸ್ತೆ ಗುಂಡಿ ಮುಚ್ಚಬೇಕು. ಇದನ್ನೂ ಓದಿ : – ಜನಸಂಖ್ಯೆಗನುಗುಣವಾಗಿ ಮೀಸಲಾತಿ ನೀಡಲು ಕ್ರಮ ವಹಿಸುತ್ತೇವೆ – ಎಂ.ಟಿ.ಬಿ ನಾಗರಾಜ್
ರಾಜ್ಯ ರಾಜಧಾನಿ ಬೆಂಗಳೂರಿ ( BANGALROE ) ನಲ್ಲಿ ರಸ್ತೆ ಗುಂಡಿಗೆ ಅನೇಕ ಜೀವಗಳು ಪ್ರಾಣ ಬಿಟ್ಟಿವೆ. ಈ ಬಗ್ಗೆ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳದಿರುವುದಕ್ಕೆ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು ಟೆಕ್ನಾಲಜಿ ಬಳಸಿಕೊಂಡು ನಗರದಲ್ಲಿನ ರಸ್ತೆ ಗುಂಡಿ ಮುಚ್ಚಬೇಕು ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ. ರಸ್ತೆಗಳಲ್ಲಿನ ಗುಂಡಿ ಮುಚ್ಚುವ ಜವಾಬ್ದಾರಿ ಸರ್ಕಾರದ ಮೇಲಿದೆ. ಬೆಂಗಳೂರಿಗೆ 6 ಸಾವಿರ ಕೋಟಿ ವಿಶೇಷ ಅನುದಾನ ಕೊಟ್ಟಿದ್ದಾರೆ. ಗುಂಡಿ ಮುಚ್ಚುನ ಕೆಲಸ ಸರ್ಕಾರ ಮಾಡಲಿದೆ ಎಂದು ಹೇಳಿದರು.
ನನ್ನ ಶಕ್ತಿ ಶಿವ ಎಂಬ ರಾಹುಲ್ ಗಾಂಧಿ ಹೇಳಿಕೆ ವಿಚಾರ
ಅಕಸ್ಮಾತ್ ಅವರು ಹಾಗೆ ಹೇಳಿದ್ದಿದ್ರೆ ರಾಮಮಂದಿರ ನಿರ್ಮಿಸಲು ಮೋದಿಯೇ ಬರಬೇಕು ಅಂತಿರ್ಲಿಲ್ಲ. ಶಿವನನ್ನೇ ನಂಬಿದ್ದಾರೆ ಅಂದ್ರೆ ಪುನರುತ್ಥಾನ ಯಾವಾಗಲೋ ಆಗಿ ಹೋಗ್ತಿತ್ತು. ಅವರ ಬಾಯಲ್ಲಿ ತಾವೊಬ್ಬ ಶಿವಭಕ್ತ ಅಂತ ಹೇಳಿಕೊಳ್ಳುವ ಮಟ್ಟಕ್ಕೆ ಬೆಳವಣಿಗೆ ಆಗಿರೋದು ಸ್ವಾಗತಾರ್ಹ ಬೆಳವಣಿಗೆ. ಅವರ ಹೇಳಿಕೆಯನ್ನು ಅವರು ರಾಜಕೀಯವಾಗಿ ಬಳಕೆ ಮಾಡಿಕೊಳ್ಳೋದು ಬೇಡ. ರಾಹುಲ್ ಗಾಂಧಿ ಆಗಾಗ ಬರ್ತಾ ಇದ್ರೆ ನಮಗೂ ನಿಮಗೂ ಮನೋರಂಜನೆ ಸಿಗುತ್ತೆ. ರೋಡ್ ನಲ್ಲಿ ಬಸ್ಕಿ ಹೊಡೆಯುವುದು, ಈಜುವುದು, ಟ್ಯಾಂಕ್ ಹತ್ತುವುದು. ಇದೆಲ್ಲಾ ಛೀಪ್ ಮೆಂಟಲಿಟಿ. ಇವೆಲ್ಲಾ ಸುದ್ದಿಗೊಸ್ಕರ ಅಷ್ಟೇ. ಉಜ್ಜಯಿನಿ ಮಹಾಕಾಲ, ಕಾಶಿ, ರಾಮ ಮಂದಿರ ನಿರ್ಮಾಣಕ್ಕೆ ಬಿಜೆಪಿ, ಮೋದಿ ಬರಬೇಕಾಯಿತು. ಸೋಮನಾಥ ಪುನರುತ್ಥಾನ ಮಾಡೋದಕ್ಕೆ ವಿರೋಧ ಮಾಡಿದ ಕುಟುಂಬ ಯಾವುದು ಅಂತ ಜನರಿಗೆ ಗೊತ್ತಿದೆ. ಹಾಗೆ ಮಾಡಬೇಕಿದ್ರೆ ಸ್ವಾತಂತ್ರ್ಯ ಬಂದಾಗಲೇ ಮಾಡುತ್ತಿದ್ರು. ಕುಂಕುಮ ಕಂಡ್ರೆ ಹೆದರುವವರು, ಎಲೆಕ್ಷನ್ ಬಂದಾಗ ಅಣೆ ತುಂಬ ಬೊಟ್ಟು ಇಡ್ತಾರೆ. ನೆಹರು ನನ್ನನ್ನ ಕತ್ತೆ ಅಂತ ಕರೀರಿ, ಹಿಂದೂ ಅಂತ ಕರೀಬೇಡಿ ಅಂದಿದ್ರು. ಈಗ ರಾಹುಲ್ ಗಾಂಧಿ ( RAHUL GANDHI ) ಶಿವ ಭಕ್ತ ಅಂತ ಹೇಳ್ತಿದ್ದಾರೆ. ಶಿವನ ಭಕ್ತಿ ನಿಜವಾಗಿಯೂ ಇದ್ರೆ ಒಳ್ಳೆಯದು. ಅದು ನಾಟಕ ಆಗಬಾರದು. ಇವರ ಅಮ್ಮ ಕುಂಕುಮ ಇಡ್ತಾರೋ ಇಲ್ಲವೋ. ನಮ್ಮ ಕಡೆ ಮದುವೆಯಲ್ಲಾದ್ರೂ ಅರಿಶಿಣ, ಕುಂಕುಮ ಇಡ್ತಾರೆ. ಇವರು ಮದುವೆಯಲ್ಲೂ ಇಟ್ಟಿದ್ರೋ ಇಲ್ಲವೋ ಗೊತ್ತಿಲ್ಲ ಎಂದು ರಾಹುಲ್ ಹಾಗೂ ಸೋನಿಯಾ ಗಾಂಧಿ ಬಗ್ಗೆ ವ್ಯಂಗ್ಯವಾಡಿದ್ದಾರೆ.
ಇದನ್ನೂ ಓದಿ : – ಮಂತ್ರಾಲಯಕ್ಕೆ ಗಾಂಧಿ ಕುಟುಂಬದ ಮೊದಲ ಭೇಟಿ – ಗುರುವಾರ ರಾಹುಲ್ ರಾಯರ ದರ್ಶನ