ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ( JAYALALITHA )ಸಾವಿಗೆ ಆಪ್ತೆ ವಿ.ಕೆ ಶಶಿಕಲಾ ( SHASHIKALA ) ಕಾರಣ ಎಂದು ನ್ಯಾ. ಆರುಮುಗಸ್ವಾಮಿ ಆಯೋಗ ಹೇಳಿದೆ. ಜೆ ಜಯಲಲಿತಾ ಅವರ ಸಾವಿನ ಕುರಿತಾದ ತನ್ನ 608 ಪುಟಗಳ ವರದಿಯನ್ನು ನ್ಯಾ. ಆರುಮುಗಸ್ವಾಮಿ ಆಯೋಗ ಸಲ್ಲಿಸಿದ ವರದಿ ಇಂದು ವಿಧಾನಸಭೆಯಲ್ಲಿ ಮಂಡನೆಯಾಗಿದೆ.
ಸಮಿತಿಯ ಪರಿಶೀಲನೆಯ ಪ್ರಕಾರ ಜಯಲಲಿತಾ ಸಾವು ಪ್ರಕರಣದಲ್ಲಿ ಅವರ ಆಪ್ತ ಸಹಾಯಕಿ ವಿ.ಕೆ. ಶಶಿಕಲಾ, ಡಾ ಶಿವಕುಮಾರ್ (ಜಯಲಲಿತಾ ಅವರ ಆಪ್ತ ವೈದ್ಯ ಮತ್ತು ಶಶಿಕಲಾ ಅವರ ಸಂಬಂಧಿ), ಮಾಜಿ ಆರೋಗ್ಯ ಕಾರ್ಯದರ್ಶಿ ರಾಧಾಕೃಷ್ಣನ್ ಮತ್ತು ಮಾಜಿ ಆರೋಗ್ಯ ಸಚಿವ ಸಿ.ವಿಜಯಭಾಸ್ಕರ್ ಅವರನ್ನು ತಪ್ಪಿತಸ್ಥರೆಂದು ಗುರುತಿಸಿದ್ದು, ಅವರ ವಿರುದ್ಧ ತನಿಖೆ ನಡೆಸಬೇಕೆಂದು ಹೇಳಿದೆ. ಇದನ್ನೂ ಓದಿ : – ಸಮಯ ಬಂದ್ರೆ ನ್ಯಾಯದ ತಕ್ಕಡಿ ಹಿಡಿದೇ ಹೋಗ್ತೀನಿ – ಸಿ.ಟಿ ರವಿ ಹೇಳಿದ್ದೇಕೆ…?
ನ್ಯಾಯಮೂರ್ತಿ ಎ ಆರುಮುಗಸ್ವಾಮಿ ಸಮಿತಿಯೂ ಜಯಲಲಿತಾ ಆಸ್ಪತ್ರೆಗೆ ದಾಖಲಾದ ದಿನದಿಂದ ಅವರಿಗೆ ನೀಡಿದ ಎಲ್ಲಾ ಬಗೆಯ ಚಿಕಿತ್ಸೆಗಳ ಬಗ್ಗೆ ಅಧ್ಯಯನ ಮಾಡಿ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಸಮಿತಿಯೂ ಈ ಹಿಂದೆ ವರದಿಯನ್ನು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್( M.K STALIN ) ಅವರಿಗೆ ಸಲ್ಲಿಸಿತ್ತು. ಇದಾದ ಬಳಿಕ ಕಳೆದ ಆಗಸ್ಟ್ ನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿವರವಾಗಿ ಚರ್ಚಿಸಲಾಗಿತ್ತು.
ಇದನ್ನೂ ಓದಿ : – ಜನಸಂಖ್ಯೆಗನುಗುಣವಾಗಿ ಮೀಸಲಾತಿ ನೀಡಲು ಕ್ರಮ ವಹಿಸುತ್ತೇವೆ – ಎಂ.ಟಿ.ಬಿ ನಾಗರಾಜ್