ಕರ್ನಾಟಕದಲ್ಲಿ 1 ಲಕ್ಷ ಕೋಟಿ ರೂ. ಹೂಡಿಕೆ – ಸಜ್ಜನ್ ಜಿಂದಾಲ್ ಘೋಷಣೆ

ರಾಜ್ಯದಲ್ಲಿ ಮುಂದಿನ ವರ್ಷಗಳಲ್ಲಿ 1 ಲಕ್ಷ ಕೋಟಿ ರೂ. ಹೂಡಿಕೆ ಮಾಡುವುದಾಗಿ ಜೆಎಸ್ಡಬ್ಲ್ಯೂ ಗ್ರೂಪ್ ಅಧ್ಯಕ್ಷ ಸಜ್ಜನ್ ಜಿಂದಾಲ್ ( Sajjan Jindal) ಇಂದು ಘೋಷಿಸಿದ್ದಾರೆ.

ರಾಜ್ಯದಲ್ಲಿ ಮುಂದಿನ ವರ್ಷಗಳಲ್ಲಿ 1 ಲಕ್ಷ ಕೋಟಿ ರೂ. ಹೂಡಿಕೆ ಮಾಡುವುದಾಗಿ ಜೆಎಸ್ಡಬ್ಲ್ಯೂ ಗ್ರೂಪ್ ಅಧ್ಯಕ್ಷ ಸಜ್ಜನ್ ಜಿಂದಾಲ್ ( Sajjan Jindal) ಇಂದು ಘೋಷಿಸಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಅವರು ಈ ಘೋಷಣೆ ಮಾಡಿದರು. ಕರ್ನಾಟಕದಲ್ಲಿ ಹೂಡಿಕೆಗೆ ಅನೇಕ ಉದ್ಯಮಿಗಳು ಆಸಕ್ತಿ ತೋರಿದ್ದಾರೆ. ಇದರ ಬೆನ್ನಲ್ಲೇ, ರಾಜ್ಯದಲ್ಲಿ ನಾವು 50 ಸಾವಿರ ಕೋಟಿ ರೂ. ಹೂಡಿಕೆ ಮಾಡುತ್ತೇವೆ ಎಂದು ಸ್ಟರ್ಲೈಟ್ ಪವರ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಇಒ) ಪ್ರತೀಕ್ ಅಗರ್ವಾಲ್ ಘೋಷಿಸಿದ್ದಾರೆ. ಇಂಧನ ಕ್ಷೇತ್ರ ಹಾಗೂ ಹಸಿರು ಇಂಧನ ಕ್ಷೇತ್ರಕ್ಕೆ ಸಂಬಂಧಿಸಿದ ಸಂಶೋಧನೆಯಲ್ಲಿ ಹೂಡಿಕೆ ಮಾಡುವುದಾಗಿ ಅವರು ತಿಳಿಸಿದ್ದಾರೆ. ಇದನ್ನೂ ಓದಿ : –  ಡಿಕೆಶಿ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ – ದೆಹಲಿ ಹೈ ಕೋರ್ಟ್ ನಿಂದ ED ಗೆ ನೋಟಿಸ್ ಜಾರಿ


ಮುಂದಿನ 7 ವರ್ಷಗಳಲ್ಲಿ 1 ಲಕ್ಷ ಕೋಟಿ ರೂ. ಹೂಡಿಕೆ – ಕರಣ್ ಅದಾನಿ
ಕರ್ನಾಟಕದಲ್ಲಿ ಮುಂದಿನ 7 ವರ್ಷಗಳಲ್ಲಿ 1 ಲಕ್ಷ ಕೋಟಿ ರೂ. ಹೂಡಿಕೆ ಮಾಡುವುದಾಗಿ ಅದಾನಿ ಗ್ರೂಪ್ ಸಿಇಒ ಕರಣ್ ಅದಾನಿ ( karan adani ) ಘೋಷಣೆ ಮಾಡಿದ್ದಾರೆ. ಮಲ್ಟಿಪಲ್ ಲಾಜಿಸ್ಟಿಕ್ ಪಾರ್ಕ್ ಅಭಿವೃದ್ಧಿ, ಆಹಾರ ಸಂಸ್ಕರಣೆ, ಇಂಧನ, ನವೀಕರಿಸಬಹುದಾದ ಇಂಧನ, ಸೌರ ಶಕ್ತಿ, ಜಲಸಾರಿಗೆ ಹಾಗೂ ಲಾಜಿಸ್ಟಿಕ್ ಕ್ಷೇತ್ರದಲ್ಲೂ ಹೂಡಿಕೆ ಮಾಡುವುದಾಗಿ ಅವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : –  Blue Tick ಪಡೆಯಲು ತಿಂಗಳಿಗೆ 8 ಡಾಲರ್ ಪಾವತಿಸಿ – ಎಲಾನ್ ಮಸ್ಕ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!