ಚಿಕ್ಕಮಗಳೂರು (Chikkamagaluru) ನಗರದ ಮಾರ್ಕೆಟ್ ರಸ್ತೆಯಲ್ಲಿರುವ ಕಾಂಗ್ರೆಸ್ ನಾಯಕಿ ಮಾಜಿ ಎಂಎಲ್ ಸಿ ಗಾಯತ್ರಿ ಶಾಂತೇಗೌಡ (Gayatri shantegowda) ನಿವಾಸಕ್ಕೆ ಹತ್ತಕ್ಕೂ ಹೆಚ್ಚು ವಾಹನಗಳಲ್ಲಿ ಬಂದು IT ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೇಲೂರಿನಲ್ಲಿರುವ ಅಳಿಯ ಸಂತೋಷ್ ನಿವಾಸದ ಮೇಲೂ IT ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಖಲೆಗಳ ಪರಿಶೀಲನೆಯಲ್ಲಿ IT ಅಧಿಕಾರಿಗಳು ತೊಡಗಿದ್ದಾರೆ.
ಅನುಮಾನ ಬಾರದಿರಲಿ ಎಂಬ ಕಾರಣಕ್ಕೆ ಕಾರಿನ ಮುಂಭಾಗ ಮದುವೆಯ ಬೋರ್ಡ್ ನ್ನು ಅಧಿಕಾರಿಗಳು ಹಾಕಿಕೊಂಡು ಬಂದಿದ್ದಾರೆ. ಅಭಿನವ್ ವೆಡ್ಸ್ ದೀಪಿಕಾ ಎಂಬ ಪೋಸ್ಟರ್ ಅಂಟಿಸಿಕೊಂಡಿರುವ ವಾಹನಗಳಲ್ಲಿ IT ಅಧಿಕಾರಿಗಳು ಬಂದಿದ್ದಾರೆ. ಗಾಯತ್ರಿ ಅವರ ಪತಿ ಶಾಂತೇಗೌಡರು ಗುತ್ತಿಗೆದಾರರು. ಕಳಸಾಪುರ ರಸ್ತೆಯಲ್ಲಿರುವ ಅವರ ಮಾಲೀಕತ್ವದ ಕ್ರಷರ್ ಮೇಲೆಯೂ IT ಅಧಿಕಾರಿಗಳ ದಾಳಿ ನಡೆದಿದೆ. ದಾಳಿಯ ವೇಳೆ ಗಾಯತ್ರಿ ಶಾಂತೇಗೌಡರಿಗೆ ಸಂಬಂಧಿಸಿದ ಆಸ್ತಿ ವಿವರಗಳನ್ನು ಅಧಿಕಾರಿಗಳು ಪಡೆದುಕೊಳ್ಳುತ್ತಿದ್ದಾರೆ. ಇದನ್ನೂ ಓದಿ : – ಜೈಲಿನಿಂದಲೇ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಸಿದ ಎಸ್.ಕೆ ಬಸವರಾಜನ್
ದಾಳಿ ನಡೆದಿರುವ ಸ್ಥಳ
ಚಿಕ್ಕಮಗಳೂರಿನ ಗಾಯತ್ರಿ ಶಾಂತೇಗೌಡ ನಿವಾಸ
ಚಿಕ್ಕಮಗಳೂರಿನಲ್ಲಿ ಗಾಯತ್ರಿ ಶಾಂತೇಗೌಡ ಕಚೇರಿ
ಗಾಯಿತ್ರಿ ಶಾಂತೇಗೌಡ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮೂವರ ಮನೆ ಮೇಲೂ ದಾಳಿ
ಚಿಕ್ಕಮಗಳೂರು ತಾಲೂಕಿನ ಮರ್ಲೆ ಕಲ್ಲಿನ ಕ್ರಷರ್ ಮೇಲೂ ದಾಳಿ
ಹಾಸನ ಜಿಲ್ಲೆಯ ಬೇಲೂರಿನ ಅಳಿಯನ ಮನೆ ಮೇಲೆ ದಾಳಿ
ಬೆಂಗಳೂರಿನ ನಾಗರಬಾವಿಯಲ್ಲಿರುವ ಗಾಯತ್ರಿ ಶಾಂತೇಗೌಡ ನಿವಾಸ ಮೇಲೆ ದಾಳಿ
ಮಾಜಿ ಎಂಎಲ್ಸಿ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯಾಗಿರುವ ಗಾಯತ್ರಿ ಶಾಂತೇಗೌಡ.
ಇದನ್ನೂ ಓದಿ : – ಹಿಂದೂ ಧರ್ಮ ಯಾರೂ ಯಾರನ್ನೂ ನಂಬಿ ಅಂತ ಹೇಳಲ್ಲ – ಚಕ್ರವರ್ತಿ ಸೂಲಿಬೆಲೆ