ಮಳೆಯಿಂದ ರದ್ದಾಗಿದ್ದ ಜೆಡಿಎಸ್ ( JDS ) ನ ಪಂಚರತ್ನ ರಥಯಾತ್ರೆ ಇಂದಿನಿಂದ ಕೋಲಾರ ( KOLARA ) ಜಿಲ್ಲೆ ಮುಳಬಾಗಿಲು ತಾಲೂಕಿನ ಕುರುಡುಮಲೈ ( KURUDUMALE ) ನಿಂದ ಪುನಾರಂಭವಾಗಲಿದೆ.
ನ.1ರಂದು ಕುರುಡುಮಲೈ ಗಣಪತಿ ದೇವಾಲಯದಿಂದ ರಥಯಾತ್ರೆ ಪ್ರಾರಂಭವಾಗಿತ್ತಾದರೂ ಮಳೆಯ ಕಾರಣಕ್ಕೆ ಮುಂದೂಡಲಾಗಿತ್ತು. ಮಳೆ ನಿಂತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಮತ್ತೆ ಪಂಚರತ್ನ ರಥಯಾತ್ರೆ ಪ್ರಾರಂಭವಾಗಲಿದೆ.
ಪಂಚರತ್ನ ಯಾತ್ರೆಯಲ್ಲಿ ಭಾಗವಹಿಸುವ ಮುನ್ನ ಮೈಸೂರಿಗೆ ಭೇಟಿ ನೀಡಿ ಇಂದು ಬೆಳಗ್ಗೆಯೇ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸುವ ಕುಮಾರಸ್ವಾಮಿ ( KUMARSWAMY ) ಅವರು ನಂತರ ಮುಳಬಾಗಿಲಿಗೆ ಆಗಮಿಸಿ ಪಂಚರತ್ನ ಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದೇ ವೇಳೆ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಸಹ ಎಲ್ಲಾ ರಥಗಳಿಗೆ ಪೂಜೆ ಸಲ್ಲಿಸಲಿದ್ದಾರೆ. ಇದನ್ನೂ ಓದಿ : – ಫ್ರಂಟ್ ಲೈನ್ ಮ್ಯಾಗಜಿನ್ ನಲ್ಲಿ ಕಾಂತಾರ ಪೋಸ್ಟರ್
ಇಂದು ಮಧ್ಯಾಹ್ನ 2 ಗಂಟೆಗೆ ಮುಳಬಾಗಿಲು ಪಟ್ಟಣದ ತಿರುಪತಿ ಬೈಪಾಸ್ ರಸ್ತೆಯಲ್ಲಿರುವ ಬಾಲಾಜಿ ಭವನದ ಪಕ್ಕದಲ್ಲಿನ ಜಾಗದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಲಕ್ಷಾಂತರ ಜನ ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಪಕ್ಷದ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಎಲ್ಲ ಶಾಸಕರು, ಮಾಜಿ ಸಚಿವರು, ಎಲ್ಲ ಕ್ಷೇತ್ರಗಳ ಸಂಭವನೀಯ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ.
ಇದನ್ನೂ ಓದಿ : – ಓವರ್ ಟೇಕ್ ವೇಳೆ BMTC ಬಸ್ಸಿಗೆ ಬೈಕ್ ಸವಾರ ಬಲಿ