ಇಂದು ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರಣೆ – ವಿಪಕ್ಷ ನಾಯಕರಿಗೆ ಸಿಎಂ ಬೊಮ್ಮಾಯಿ ಪತ್ರ

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಮತ್ತೆ ತಾರಕಕ್ಕೇರಿದೆ. ಸ್ವಾತಂತ್ರ್ಯ ನಂತರ ಶುರುವಾದ ಬೆಳಗಾವಿ ( BELGAVI ) ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಇಂದು ಸುಪ್ರೀಂ ಕೋರ್ಟ್ ( SUPREM COURT ) ನಲ್ಲಿ ವಿಚಾರಣೆ ನಡೆಯಲಿದೆ.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಮತ್ತೆ ತಾರಕಕ್ಕೇರಿದೆ. ಸ್ವಾತಂತ್ರ್ಯ ನಂತರ ಶುರುವಾದ ಬೆಳಗಾವಿ ( BELGAVI ) ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಇಂದು ಸುಪ್ರೀಂ ಕೋರ್ಟ್ ( SUPREM COURT ) ನಲ್ಲಿ ವಿಚಾರಣೆ ನಡೆಯಲಿದೆ.

ಈ ಹಿನ್ನೆಲೆ ವಿಪಕ್ಷನಾಯಕರಿಗೆ ಸಿಎಂ ಬೊಮ್ಮಾಯಿ ಪತ್ರ ಬರೆದಿದ್ದು ಸುಪ್ರೀಂ ಕೋರ್ಟ್ ವಿಚಾರಣೆಯ ಬಳಿಕ ಶೀಘ್ರ ಸಭೆ ನಿಗದಿಗೆ ಚಿಂತಿಸಿದ್ದಾರೆ. ಸಿಎಂ ಬೊಮ್ಮಾಯಿ ( BASAVARAJ BOMMAI ) ವಿಧಾನಸಭೆಯ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ( SIDDARFAMAIAHA ) ಹಾಗೂ ಪರಿಷತ್ ವಿಪಕ್ಷನಾಯಕ ಹರಿಪ್ರಸಾದ್ ಗೆ ಬರೆದ ಪತ್ರದಲ್ಲಿ ಸರ್ಕಾರ ತೆಗೆದುಕೊಂಡ ನಿಲುವು, ವಕೀಲರ ತಂಡ ರಚನೆ ಹಾಗೂ ಕೈಗೊಂಡ ಕ್ರಮ ಕುರಿತು ಪತ್ರದ ಮೂಲಕ ಲಿಖಿತ ಮಾಹಿತಿ ನೀಡಿದ್ದಾರೆ.  ಇದನ್ನೂ ಓದಿ : –  ನಂದಿನಿ ಹಾಲಿನ ದರ ಏರಿಕೆ ಬಹುತೇಕ ಖಚಿತ…!


ಸತತ 18 ವರ್ಷಗಳ ಬಳಿಕ ಮತ್ತೆ ಕಾನೂನು ಸಮರ ಶುರುವಾಗಿದೆ. ಇಂದು ದೇಶದ ಸರ್ವೋಚ್ಚ ನ್ಯಾಯಾಲಯದಲ್ಲಿ ಗಡಿ ತಗಾದೆಯ ವಿಚಾರಣೆ ನಡೆಯಲಿದೆ. ಅತ್ತ ಮಹಾರಾಷ್ಟ್ರ, ಇತ್ತ ಕರ್ನಾಟಕ ( KARANATAKA )ಎರಡೂ ರಾಜ್ಯಗಳು ಕಾನೂನು ರೀತಿಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿವೆ. ಕೋರ್ಟ್ ಕಟೆಕಟೆಯಲ್ಲಿ ವಾದ ಮಂಡಿಸಲು ಸಜ್ಜಾಗಿವೆ. ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ಇಂದು, ನಿನ್ನೆಯದಲ್ಲ. 1956ರಿಂದಲೂ ಮಹಾರಾಷ್ಟ್ರ ಸರ್ಕಾರ ನಾಡದ್ರೋಹಿ ಎಂಇಎಸ್ ಗೆ ಪ್ರಚೋದನೆ ನೀಡುತ್ತಲೇ ಬಂದಿದೆ. ಬೆಳಗಾವಿ ಸೇರಿ ಕರ್ನಾಟಕದ 4 ಜಿಲ್ಲೆಯ 865 ಹಳ್ಳಿಗಳು ಮಹಾರಾಷ್ಟ್ರಕ್ಕೆ ಸೇರಬೇಕು ಎಂದು 2004ರಲ್ಲಿ ಮಹಾರಾಷ್ಟ್ರ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಈ ಪ್ರಕರಣದ ಅಂತಿಮ ವಿಚಾರಣೆ ಇಂದು ಸುಪ್ರೀಂಕೋರ್ಟ್ನಲ್ಲಿ ನಡೆಯಲಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರ ಎರಡೂ ಸರ್ಕಾರಗಳ ವಾದ ಪ್ರತಿವಾದವನ್ನು ಇಂದು ಸುಪ್ರೀಂ ಕೋರ್ಟ್ ಆಲಿಸಲಿದೆ.

 ಇದನ್ನೂ ಓದಿ : – ಬೆಳ್ಳಂಬೆಳಗ್ಗೆ ಖಾಕಿ ಕಾರ್ಯಾಚರಣೆ – 86 ರೌಡಿಶೀಟರ್ ಗಳ ಮನೆ ಮೇಲೆ ದಾಳಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!