ಬೆಂಗಳೂರಿನಲ್ಲಿ 22 ಲಕ್ಷ ನಗದು, ಒಂದು ಕೆಜಿ ಚಿನ್ನಾಭರಣ ಪತ್ತೆ…!

ಬೆಂಗಳೂರಿ (Bengaluru) ನಲ್ಲಿ ಭಾನುವಾರ ರಾತ್ರಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ (Gold ornaments) , ನಗದು ಇರುವ ಬ್ಯಾಗನ್ನು ಬೀಟ್ ನಲ್ಲಿದ್ದ ಹೊಯ್ಸಳ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ನಗರದ ಎಸ್.ಪಿ ರಸ್ತೆಯಲ್ಲಿ ಹೊಯ್ಸಳ ಸಿಬ್ಬಂದಿ ಬೀಟ್ ನಲ್ಲಿದ್ದ ವೇಳೆ ವ್ಯಕ್ತಿಯೊಬ್ಬ ಬ್ಯಾಗ್ ಹಿಡಿದು ಅನುಮಾನಾಸ್ಪದವಾಗಿ ಓಡಾಡುತ್ತಿದ್ದ.

ಬೆಂಗಳೂರಿ (Bengaluru) ನಲ್ಲಿ ಭಾನುವಾರ ರಾತ್ರಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ (Gold ornaments) , ನಗದು ಇರುವ ಬ್ಯಾಗನ್ನು ಬೀಟ್ ನಲ್ಲಿದ್ದ ಹೊಯ್ಸಳ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ನಗರದ ಎಸ್.ಪಿ ರಸ್ತೆಯಲ್ಲಿ ಹೊಯ್ಸಳ ಸಿಬ್ಬಂದಿ ಬೀಟ್ ನಲ್ಲಿದ್ದ ವೇಳೆ ವ್ಯಕ್ತಿಯೊಬ್ಬ ಬ್ಯಾಗ್ ಹಿಡಿದು ಅನುಮಾನಾಸ್ಪದವಾಗಿ ಓಡಾಡುತ್ತಿದ್ದ.

ಆತನ ನಡವಳಿಕೆಯನ್ನು ಗಮನಿಸಿದ ಹೊಯ್ಸಳ ಪೊಲೀಸರು (Hoysala police) ಹಿಂಬಾಲಿಸಿ ಆತನನ್ನು ತಡೆದಿದ್ದಾರೆ. ಈ ವೇಳೆ ಆತ ವಿನೋದ್ ಎಂದು ಹೇಳಿದ್ದಾನೆ. ಬ್ಯಾಗ್ ಪರಿಶೀಲನೆ ನಡೆಸಿದ ವೇಳೆ 22 ಲಕ್ಷ ರೂ. ನಗದು, 1 ಕೆಜಿ ಚಿನ್ನಾಭರಣ ಪತ್ತೆಯಾಗಿದೆ. ವಿಚಾರಣೆ ವೇಳೆ ಚೆನ್ನೈನಿಂದ ಚಿನ್ನ ಮತ್ತು ನಗದು ತಂದಿರುವ ಬಗ್ಗೆ ಮಾಹಿತಿ ನೀಡಿದ ವಿನೋದ್, ಇದನ್ನು ಕೊಟ್ಟವರು ಯಾರು ಎಂಬ ಪ್ರಶ್ನೆಗೆ ಉತ್ತರ ನೀಡಲಿಲ್ಲ. ಮತ್ತಷ್ಟು ವಿಚಾರಣೆಗೆ ಒಳಪಡಿಸಿದಾಗ ಆತ ಬ್ಯಾಗ್ ಬಿಟ್ಟು ಪರಾರಿಯಾಗಿದ್ದಾನೆ. ಇದನ್ನೂ ಓದಿ : –  ಅಧಿಕಾರದಲ್ಲಿರಬೇಕೆಂದು ಸಿದ್ದರಾಮಯ್ಯಗೆ ಆಸೆ ಇದೆ – ಅಶ್ವಥ್ ನಾರಾಯಣ್

ಹವಾಲಾ ಮೂಲಕ ವ್ಯವಹಾರ ನಡೆಸುತ್ತಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು ತನಿಖೆ ಆರಂಭವಾಗಿದೆ. ಹೊಯ್ಸಳ ಸಿಬ್ಬಂದಿಯ ಕಾರ್ಯಕ್ಷಮತೆ ಬಗ್ಗೆ ಹಿರಿಯ ಅಧಿಕಾರಿಗಳ ಮೆಚ್ಚುಗೆ ವ್ಯಕ್ತವಾಗಿದ್ದು, ಎಸ್ ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : – ಕಳ್ಳತನ ಮಾಡುವರು ನೀವೇ…ಪೊಲೀಸರು ಆಗುವರು ನೀವೇ – ಎಂ.ಬಿ ಪಾಟೀಲ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!