ದಲಿತರ ನಿರೀಕ್ಷೆಯನ್ನು ಹುಸಿ ಮಾಡಿ, ದಲಿತರ ಹೆಸರಲ್ಲಿ ಅಧಿಕಾರ ಅನುಭವಿಸಿದ್ದು ಮರೆತು ಹೋಯಿತಾ? ದಲಿತರಿಗೆ ಸಿದ್ದರಾಮಯ್ಯ( siddaramaiah ) ಅವರಿಂದ ಯಾವತ್ತಿಗೂ ಸಿಗುವುದು ಕುತಂತ್ರದ ಒಳ ಏಟು ಮಾತ್ರ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಗಳ ಮೂಲಕ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ಮಾನ್ಯ @siddaramaiah ರವರು ಐದು ವರ್ಷ ಅಧಿಕಾರದಲ್ಲಿದ್ದಾಗಲೇ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಬಂದಿದೆ. ಆಗ ವರದಿ ಜಾರಿ ಮಾಡುವ ಬಗ್ಗೆ ಆಲೋಚಿಸದ ಪ್ರತಿಪಕ್ಷದ ನಾಯಕರು, ಮುಂದಿನ ಬಾರಿ ಅಧಿಕಾರಕ್ಕೆ ಬಂದರೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೊಳಿಸುವ ಮಾತನಾಡುತ್ತಿರುವುದು ಹಾಸ್ಯಾಸ್ಪದ.
— BJP Karnataka (@BJP4Karnataka) December 12, 2022
ಸಿದ್ದರಾಮಯ್ಯ ಅವರು ಐದು ವರ್ಷ ಅಧಿಕಾರದಲ್ಲಿದ್ದಾಗಲೇ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಬಂದಿದೆ. ಆಗ ವರದಿ ಜಾರಿ ಮಾಡುವ ಬಗ್ಗೆ ಆಲೋಚಿಸದ ಪ್ರತಿಪಕ್ಷದ ನಾಯಕರು, ಮುಂದಿನ ಬಾರಿ ಅಧಿಕಾರಕ್ಕೆ ಬಂದರೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೊಳಿಸುವ ಮಾತನಾಡುತ್ತಿರುವುದು ಹಾಸ್ಯಾಸ್ಪದ. ಇದನ್ನು ಓದಿ : – ಆನೆ ದಾಳಿಗೆ ಒಳಗಾದವರಿಗೆ ಪರಿಹಾರ ಹೆಚ್ಚಳ – 7.5ಲಕ್ಷ ಇದ್ದ ಪರಿಹಾರ 15ಲಕ್ಷಕ್ಕೆ ಹೆಚ್ಚಳ
ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗಲೇ ಮಾದಿಗ ಸಮುದಾಯ ದೊಡ್ಡ ಸಮಾವೇಶವನ್ನು ಮಾಡಿ, ಆ ಸಂದರ್ಭದಲ್ಲಿ @siddaramaiah ಅವರು ನ್ಯಾ. ಸದಾಶಿವ ಆಯೋಗದ ವರದಿ ಜಾರಿ ಮಾಡುವ ಘೋಷಣೆ ಮಾಡುತ್ತಾರೆಂಬ ದಲಿತರ ನಿರೀಕ್ಷೆಯನ್ನು ಹುಸಿ ಮಾಡಿ, ದಲಿತರ ಹೆಸರಲ್ಲಿ ಅಧಿಕಾರ ಅನುಭವಿಸಿದ್ದು ಮರೆತು ಹೋಯಿತಾ?
— BJP Karnataka (@BJP4Karnataka) December 12, 2022
ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗಲೇ ಮಾದಿಗ ಸಮುದಾಯ ದೊಡ್ಡ ಸಮಾವೇಶವನ್ನು ಮಾಡಿ, ಆ ಸಂದರ್ಭದಲ್ಲಿ ಅವರು ನ್ಯಾ. ಸದಾಶಿವ ಆಯೋಗದ ವರದಿ ಜಾರಿ ಮಾಡುವ ಘೋಷಣೆ ಮಾಡುತ್ತಾರೆಂಬ ದಲಿತರ ನಿರೀಕ್ಷೆಯನ್ನು ಹುಸಿ ಮಾಡಿ, ದಲಿತರ ಹೆಸರಲ್ಲಿ ಅಧಿಕಾರ ಅನುಭವಿಸಿದ್ದು ಮರೆತು ಹೋಯಿತಾ..?
ಈಗ @siddaramaiah ನವರು ಮತ್ತೆ ದಲಿತರಿಗೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿ ಮಾಡುವ ಸುಳ್ಳು ಭರವಸೆ ನೀಡುತ್ತಿದ್ದು, ದಲಿತರ ಮೂಗಿಗೆ ತುಪ್ಪ ಸವರುವ ನಿಮ್ಮ ಸುಳ್ಳು ಭರವಸೆಯನ್ನು ಯಾವ ದಲಿತರು ನಂಬುವ ಸ್ಥಿತಿಯಲ್ಲಿಲ್ಲ.
— BJP Karnataka (@BJP4Karnataka) December 12, 2022
ಈಗ ಸಿದ್ದರಾಮಯ್ಯನವರು ಮತ್ತೆ ದಲಿತರಿಗೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿ ಮಾಡುವ ಸುಳ್ಳು ಭರವಸೆ ನೀಡುತ್ತಿದ್ದು, ದಲಿತರ ಮೂಗಿಗೆ ತುಪ್ಪ ಸವರುವ ನಿಮ್ಮ ಸುಳ್ಳು ಭರವಸೆಯನ್ನು ಯಾವ ದಲಿತರು ನಂಬುವ ಸ್ಥಿತಿಯಲ್ಲಿಲ್ಲ.
ಅಧಿಕಾರ ಇದ್ದಾಗ ಸಿದ್ದರಾಮಯ್ಯ ದಲಿತರ ಯಾವ ಬೇಡಿಕೆನೂ ಈಡೇರಿಸಿಲ್ಲ ಹಾಗೇ ಅವರಿಂದ ತುಳಿತಕ್ಕೆ ಒಳಗಾದ ದಲಿತ ನಾಯಕರ ಪಟ್ಟಿಗೂ ಕೊನೆಯಿಲ್ಲ.
√ ಮಲ್ಲಿಕಾರ್ಜುನ ಖರ್ಗೆ
√ ಡಾ.ಜಿ.ಪರಮೇಶ್ವರ್
√ ಮೋಟಮ್ಮ
√ ಶ್ರೀನಿವಾಸ್ ಪ್ರಸಾದ್@siddaramaiah ಅವರ ದಲಿತಪರ ಪ್ರೀತಿ ಯಾವತ್ತಿಗೂ ತೋರ್ಪಡಿಕೆಗೆ ಅಷ್ಟೇ— BJP Karnataka (@BJP4Karnataka) December 12, 2022
ಅಧಿಕಾರ ಇದ್ದಾಗ ಸಿದ್ದರಾಮಯ್ಯ ದಲಿತರ ಯಾವ ಬೇಡಿಕೆನೂ ಈಡೇರಿಸಿಲ್ಲ. ಹಾಗೇ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ್, ಮೋಟಮ್ಮ, ವಿ. ಶ್ರೀನಿವಾಸ್ ಪ್ರಸಾದ್ ಸೇರಿದಂತೆ ಅವರಿಂದ ತುಳಿತಕ್ಕೆ ಒಳಗಾದ ದಲಿತ ನಾಯಕರ ಪಟ್ಟಿಗೂ ಕೊನೆಯಿಲ್ಲ. ಸಿದ್ದರಾಮಯ್ಯರ ದಲಿತಪರ ಪ್ರೀತಿ ಯಾವತ್ತಿಗೂ ತೋರ್ಪಡಿಕೆಗೆ ಅಷ್ಟೇ.
ಸಿದ್ದರಾಮಯ್ಯ ಅವರ ತೋರ್ಪಡಿಕೆಯ "ಅಹಿಂದ" ಹೋರಾಟದ ನಾಟಕದಲ್ಲಿ ಈಗ ದಲಿತರು ಇಲ್ಲ, ಹಿಂದುಳಿದವರೂ ಇಲ್ಲ. ಅವರ ವಕಾಲತ್ತೇನಿದ್ದರೂ ಒಂದು ಸಮುದಾಯದ ಪರ ಮಾತ್ರ.
ಹಿಂದುಳಿದ ಹಾಗೂ ದಲಿತ ವರ್ಗಕ್ಕೆ ಸಿದ್ದರಾಮಯ್ಯ ಅವರಿಂದ ಯಾವತ್ತಿಗೂ ಸಿಗುವುದು ಕುತಂತ್ರದ ಒಳ ಏಟು ಮಾತ್ರ.
— BJP Karnataka (@BJP4Karnataka) December 12, 2022
ಸಿದ್ದರಾಮಯ್ಯ ಅವರ ತೋರ್ಪಡಿಕೆಯ “ಅಹಿಂದ” ಹೋರಾಟದ ನಾಟಕದಲ್ಲಿ ಈಗ ದಲಿತರು ಇಲ್ಲ, ಹಿಂದುಳಿದವರೂ ಇಲ್ಲ. ಅವರ ವಕಾಲತ್ತೇನಿದ್ದರೂ ಒಂದು ಸಮುದಾಯದ ಪರ ಮಾತ್ರ. ಹಿಂದುಳಿದ ಹಾಗೂ ದಲಿತ ವರ್ಗಕ್ಕೆ ಸಿದ್ದರಾಮಯ್ಯ ಅವರಿಂದ ಯಾವತ್ತಿಗೂ ಸಿಗುವುದು ಕುತಂತ್ರದ ಒಳ ಏಟು ಮಾತ್ರ ಎಂದು ಆಕ್ರೋಶ ಹೊರಹಾಕಿದೆ.
ಇದನ್ನು ಓದಿ : – ಇಂದು ಗುಜರಾತ್ನ 18ನೇ ಸಿಎಂ ಆಗಿ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸ್ವೀಕಾರ