ಸಿಎಂ ಬೊಮ್ಮಾಯಿ ನಿವಾಸಕ್ಕೆ ಕೇಂದ್ರ ಸಚಿವ ಜೋಶಿ ಭೇಟಿ…!

ಹುಬ್ಬಳ್ಳಿ ( HUBALLI ) ಯ ಆದರ್ಶ ನಗರದಲ್ಲಿರೋ ಸಿಎಂ ಬಸವರಾಜ್ ಬೊಮ್ಮಾಯಿ ( BASAVARAJ BOMMAI ) ನಿವಾಸಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ( PRAHALD JOSHI ) ಇಂದು ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ.

ಹುಬ್ಬಳ್ಳಿ ( HUBALLI ) ಯ ಆದರ್ಶ ನಗರದಲ್ಲಿರೋ ಸಿಎಂ ಬಸವರಾಜ್ ಬೊಮ್ಮಾಯಿ ( BASAVARAJ BOMMAI ) ನಿವಾಸಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ( PRAHALD JOSHI ) ಇಂದು ಭೇಟಿ ನೀಡಿ ಚರ್ಚೆ ನಡೆಸಿದ್ದಾರೆ.

ನಂತರ ಮಾತನಾಡಿದ ಸಿಎಂ, ಕೋವಿಡ್ ವಿಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸಭೆಯಲ್ಲಿ ಸೂಚಿಸಿದಂತೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗಿದೆ. ಇದನ್ನು ಓದಿ :- ವೋಟರ್ ಐಡಿ ಅಕ್ರಮ ಪ್ರಕರಣ – ಇಬ್ಬರು IAS ಅಧಿಕಾರಿಗಳ ಅಮಾನತು ವಾಪಸ್

ಬೂಸ್ಟರ್ ಡೋಸ್ ( booster dose )ಕೊಡುವುದು, ಶಿಬಿರಗಳನ್ನು ಮಾಡಿ, ಟೆಸ್ಟಿಂಗ್ ಹೆಚ್ಚಿಸಲು ಸೂಚಿಸಿದ್ದೇನೆ. ಏರ್ಪೋರ್ಟ್ ಗಳಲ್ಲಿ ತಪಾಸಣೆ ನಡೆಸಿ ಕಟ್ಟಚ್ಚರ ವಹಿಸಲಾಗುವದು. ಹೊಸ ವರ್ಷಕ್ಕೆ ಹೊಸ ಗೈಡ್ ಬಗ್ಗೆ ಆರ್.ಅಶೋಕ್, ಸುಧಾಕರ ಚರ್ಚೆ ಮಾಡಿ ತಿಳಿಸ್ತಾರೆ. ಈಗಾಗಲೇ ಆರೋಗ್ಯ ಸಚಿವರಿಗೆ ಸನ್ನದ್ಧರಾಗುವಂತೆ ಮಾಡಿಕೊಳ್ಳುವಂತೆ ಸೂಚಿಸಿದ್ದೇನೆ. ಆಕ್ಸಿಜನ್, ಸೇರಿದಂತೆ ಅಗತ್ಯ ಸಿದ್ದತೆ ಮಾಡಿಕೊಳ್ಳುತ್ತೇವೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಮುನ್ನೆಚ್ಚರಿಕೆ ಇರಲಿ ಎಂದು ಹೇಳಿದ್ದಾರೆ.

ಸದನದಲ್ಲಿ ಉತ್ತರ ಕರ್ನಾಟಕದ ವಿಚಾರಗಳ ಚರ್ಚೆ ಆಗದ ವಿಚಾರವಾಗಿ ಮಾತನಾಡಿದ ಅವರು, ಕನಿಷ್ಠ 2-3 ದಿನ ಚರ್ಚೆ ಆಗಬೇಕು. ಸಭಾಪತಿಗಳ ಜೊತೆ ಇದೇ ವಿಚಾರ ಮಾತನಾಡಿದ್ದೇನೆ. ಅವಧಿ ಪೂರ್ಣ ಚುನಾವಣೆ ಹೋಗುವ ಮಾತೇ ಇಲ್ಲ. ಕಾಂಗ್ರೆಸ್ ( congress ) ನಾಯಕರಿಗೆ ಅಭದ್ರತೆ ಕಾಡುತ್ತಿದೆ. ಅವರ ಕಾರ್ಯಕರ್ತರನ್ನ ಸನ್ನದ್ಧ ಮಾಡಲು ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ತಿಳಿಸಿದ್ರು.

ಇದನ್ನು ಓದಿ :- ಇಂದಿನಿಂದ ಖಾಸಗಿ ಶಾಲೆಗಳಲ್ಲಿ ಕೊರೊನಾ ರೂಲ್ಸ್ ಜಾರಿ – ನೆಗಡಿ, ಕೆಮ್ಮು, ಜ್ವರ ಇರುವ ವಿದ್ಯಾರ್ಥಿಗಳಿಗೆ ರಜೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!