ಸಾರಿಗೆ ನೌಕರ (Transport workers) ರಿಗೆ ರಾಜ್ಯ ಸರ್ಕಾರ ಶಾಕ್ ಕೊಟ್ಟಿದೆ. ಸಾರಿಗೆ ನೌಕರರು ಮುಂದಿನ 6 ತಿಂಗಳ ಕಾಲ ಮುಷ್ಕರ (Protest) ನಡೆಸದಂತೆ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಆಗತ್ಯ ಸೇವಾ ನಿರ್ವಾಹಣೆ ಕಾಯ್ದೆ 2013 ರ ಅಡಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಇಂದು ಆದೇಶ ಹೊರಡಿಸಿದೆ.
ಇದರೊಂದಿಗೆ ಸರ್ಕಾರಕ್ಕೆ ಶಾಕ್ ನೀಡಲು ಮುಂದಾಗಿದ್ದ ಸಾರಿಗೆ ನೌಕರರಿಗೆ ಕೆಎಸ್ಆರ್ಟಿಸಿ ಮಾಸ್ಟರ್ ಸ್ಟ್ರೋಕ್ ಕೊಟ್ಟಿದೆ. 2023ರ ಜ.1ರಿಂದ 2023ರ ಜೂ.30ರವರೆಗೆ ನಿಗಮದಲ್ಲಿ ಮುಷ್ಕರ ನಿರ್ಬಂಧಿಸಿ ಅಧಿಸೂಚನೆ ಹೊರಡಿಸಿದ್ದು,. ಈ ಸಂಬಂಧ ಸರ್ಕಾರದ ಅಧಿಸೂಚನೆ ಪ್ರತಿಯನ್ನ ಎಲ್ಲ ಘಟಕ, ಕಾರ್ಯಗಾರ, ಕಚೇರಿ (office) ಬಸ್ ನಿಲ್ದಾಣಗಳ ಸೂಚನ ಫಲಕಗಳಲ್ಲಿ ತಪ್ಪದೆ ಪ್ರಕಟಿಸುವಂತೆ ಸೂಚನೆ ನೀಡಿದೆ. ಅಲ್ಲದೇ ಕಾರ್ಮಿಕ ಸಂಘಟನೆಗಳಿಗೂ ಪ್ರತಿ ತಲುಪಿಸುವಂತೆ ಸರ್ಕಾರ ಸೂಚಿಸಿದೆ.
ಚುನಾವಣೆ ಸಂದರ್ಭದಲ್ಲಿ ಸರ್ಕಾರಕ್ಕೆ ಸಾರಿಗೆ ನೌಕರರು ತಲೆ ಬಿಸಿಯಾಗಿದ್ದರು. ಇದನ್ನು ಓದಿ : – ಕರ್ನಾಟಕಕ್ಕೆ ಅತ್ಯಂತ ಅವಶ್ಯಕವಾಗಿದ್ದ ಕಳಸಾ ಬಂಡೂರಿ ವಿಸ್ತೃತ ಯೋಜನೆಗೆ ಅನುಮತಿ ನೀಡಿದ ಕೇಂದ್ರ ಸರ್ಕಾರ
ಆದ್ರೆ, ಇದೀಗ ಈ ಆದೇಶ ಹೊರಡಿಸುವ ಮೂಲಕ ಸಾರಿಗೆ ನೌಕರರ ಮುಷ್ಕರಕ್ಕೆ ಸರ್ಕಾರ (Government) ಬ್ರೇಕ್ ಹಾಕಿದೆ. ಕಾರ್ಮಿಕ ಇಲಾಖೆ ಹಾಗೂ ಕೆಎಸ್ಆರ್ಟಿಸಿ ಈ ರೀತಿ ಆದೇಶ ಹೊರಡಿಸುವ ಮೂಲಕ ಸಾರಿಗೆ ನೌಕರರ ಮುಷ್ಕರ ಹತ್ತಿಕ್ಕುವ ಯತ್ನ ಮಾಡಿದೆ. ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಬೆಳಗಾವಿ ಸುವರ್ಣಸೌಧದ ಮುಂಭಾಗದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಇದನ್ನು ಓದಿ : – ||SUMALATHA || ಬಿಜೆಪಿಗೆ ಸೇರ್ತಾರಾ ಸುಮಲತಾ? ಅಮಿತ್ ಶಾ ಸ್ವಾಗತದ ಫ್ಲೆಕ್ಸ್ ನಲ್ಲಿ ರಾರಾಜಿಸುತ್ತಿದೆ ಫೋಟೋ