ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪ ರೈಲ್ವೆ ಹಳಿ ಮೇಲೆ ವಿದ್ಯುತ್ ತಂತಿ ಕಡಿದು ಬಿದ್ದಿದ್ದರಿಂದ ಕೆಲಕಾಲ ಎರಡು ರೈಲುಗಳ ಸಂಚಾರ ಸ್ಥಗಿತಗೊಂಡಿದೆ ಎಂದು ವರದಿಯಾಗಿದೆ.
ತಾಳಗುಪ್ಪ – ಬೆಂಗಳೂರು ಇಂಟರ್ಸಿಟಿ ರೈಲು ಹಾಗೂ ಬೆಳಗ್ಗೆ 5:15ಕ್ಕೆ ತಾಳಗುಪ್ಪದಿಂದ ಹೊರಟಿದ್ದ ಬೆಂಗಳೂರು ಇಂಟರ್ಸಿಟಿ ರೈಲು ಬೆಳಗ್ಗೆ 6:05ಕ್ಕೆ ಆನಂದಪುರಕ್ಕೆ ತಲುಪಿ, ಅಲ್ಲಿಯೇ ನಿಂತಿತ್ತು. ಹಳಿ ಮೇಲೆ ಬಿದ್ದಿದ ವಿದ್ಯುತ್ ತಂತಿ ತೆರವುಗೊಳಿಸಿ ರಿಪೇರಿ ಕಾರ್ಯ ಮಾಡಲಾಯಿತು. ಬಳಿಕ 8:39ಕ್ಕೆ ರೈಲು ಸಂಚಾರ ಆರಂಭಿಸಿದೆ. 7 ಗಂಟೆಗೆ ಶಿವಮೊಗ್ಗ ನಿಲ್ದಾಣ ತಲುಪಬೇಕಿದ್ದ ರೈಲು 10 ಗಂಟೆ ಹೊತ್ತಿಗೆ ತಲುಪಿದೆ. ಇದರಿಂದ ಕೆಲ ಗಂಟೆಗಳ ಕಾಲ ರೈಲು ಸಂಚಾರದಲ್ಲಿ ವ್ಯತ್ಯಯ ಹಿನ್ನೆಲೆ ಹಲವು ಪ್ರಯಾಣಿಕರು ಪರದಾಡಿದ್ದಾರೆ.