ಶಿವಮೊಗ್ಗ: ಕಾಂಗ್ರೆಸ್ ನವರು ಇಂಡಿಯಾ ಬದಲು ಭಾರತ ಎಂದು ಹೆಸರಿಡುವ ಸಣ್ಣ ವಿಚಾರದಲ್ಲೂ ರಾಜಕೀಯ ಮಾಡುತ್ತಿದೆ. ಎಲ್ಲ ವಿಚಾರದಲ್ಲೂ ಕೂಡ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ಆದರೆ ಇದರಿಂದ ರಾಜಕಾರಣ ಮಾಡುವುದರಿಂದ ಯಾವ ಅರ್ಥವೂ ಇಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಭಾರತ ಎಂದು ಕರೆದರೆ ಯಾವ ತಪ್ಪಿಲ್ಲ. ಹಾಗೆಯೇ ಇಂಡಿಯಾ ಎಂದು ಕರೆದರೂ ತಪ್ಪಿಲ್ಲ. ಐಎನ್ಡಿಐಎ ರಚನೆಯಾದ ಬಳಿಗೆ ಎನ್ಡಿಎ ಏನೂ ಭಯಗೊಂಡಿಲ್ಲ. ಅದರ ಬದಲು ಆ ಸದಸ್ಯರೇ ಗಾಬರಿಯಾಗಿದ್ದಾರೆ ಎಂದು ಕುಟುಕಿದರು.
ಉದಯನಿಧಿ ಸ್ಟಾಲಿನ್ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಸನಾತನ ಧರ್ಮ ಎಂಬುದು ದೇವರಲ್ಲಿ ನಂಬಿಕೆ ಇಡುವಂಥದ್ದು ಸ್ಟಾಲಿನ್ ತಾಯಿಯೇ ಪ್ರತಿನಿತ್ಯ ದೇವಸ್ಥಾನಕ್ಕೆ ಹೋಗಿಬರುತ್ತಾರೆ. ಅತಿ ಬುದ್ಧಿವಂತರು ಈ ರೀತಿ ಹೇಳಿಕೆ ಕೊಡುತ್ತಾರೆ ಎಂದು ವ್ಯಂಗ್ಯವಾಡಿದರು. ಬಿಜೆಪಿ ಯಾವತ್ತೂ ಚುನಾವಣೆಗಾಗಿ ರಾಜಕಾರಣ ಮಾಡಿಲ್ಲ. ಧರ್ಮವನ್ನು ಅಡ್ಡ ತಂದಿಲ್ಲ ಎಂದರು.