ಬೆಂಗಳೂರು: ಬೆಂಗಳೂರಿನಲ್ಲಿ ಬಾಗಲಗುಂಟೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಕಳ್ಳತನವನ್ನೇ ಫುಲ್ ಟೈಂ ಜಾಬ್ ಮಾಡಿಕೊಂಡಿದ್ದ ಕಿಲಾಡಿಯ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಅನಿಲ್ ದೇವ್ ಎಂಬಾತ ಬಂಧನ. ಉತ್ತರಪ್ರದೇಶದಿಂದ ಬೆಂಗಳೂರಿಗೆ ಕೆಲಸಕ್ಕೆ ಬಂದು ಮನೆಗಳ್ಳತನ ಮಾಡುತ್ತಿದ್ದ ಆಸಾಮಿ.ಎರಡು ತಿಂಗಳ ಹಿಂದೆ ಜೈಲಿಂದ ರೀಲಿಸ್ ಆಗಿ ಮತ್ತೆ ಕೈಚಳಕ ತೋರಿದ್ದನು. ಬಂಧಿತನ ಮೇಲೆ 10ಕ್ಕೂ ಹೆಚ್ಚು ಠಾಣೆಗಳಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಬೀಗ ಹಾಕಿದ್ದ ಮನೆಗಳನ್ನು ಖತರ್ನಾಕ್ ಟಾರ್ಗೆಟ್ ಮಾಡುತ್ತಿದ್ದ.
ಬಂಧಿತನಿಂದ 2.76 ಲಕ್ಷ ಮೌಲ್ಯದ 40 ಗ್ರಾಂ ಚಿನ್ನಾಭರಣ, 113 ಗ್ರಾಂ ಬೆಳ್ಳಿ ವಸ್ತುಗಳ ಹಾಗೂ 54 ಸಾವಿರ ಹಣ, ಕೃತ್ಯಕ್ಕೆ ಬಳಸಿದ್ದ ರಾಡ್ ವನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.