ನನ್ನನ್ನು ಹನಿಟ್ರ್ಯಾಪ್ ಗೆ ಬಳಸಲಾಗಿದೆ ಎಂದು ಸಿಡಿ ಯುವತಿ ಎಸ್ ಐಟಿ ತನಿಖಾಧಿಕಾರಿಗೆ ಪತ್ರ ಬರೆಯುವ ಮೂಲಕ ಮಾಜಿ ಸಚಿವ ರಮೇಶ್ ಜಾರಿಕಿಹೊಳಿ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಲಭಿಸಿದೆ.
ಸಿಡಿ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿಗೆ ಪತ್ರ ಬರೆದಿರುವ ಯುವತಿ, ನಿಯಮ 164ರ ಅಡಿಯಲ್ಲಿ ನನ್ನ ಮರು ಹೇಳಿಕೆ ದಾಖಲಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾಳೆ.
ಯುವತಿಯ ಹೇಳಿಕೆ ಹಿನ್ನೆಲೆಯಲ್ಲಿ ಎಸ್ ಐಟಿ ಪೊಲೀಸರು ಮರು ವಿಚಾರಣೆ ನಡೆಸಿದ್ದಾರೆ. ಪ್ರಕರಣದಲ್ಲಿ ನನಗೆ ಅನ್ಯಾಯ ಆಗಿದ್ದು, ನನ್ನನ್ನು ಹನಿಟ್ರ್ಯಾಪ್ ಗೆ ಬಳಸಿಕೊಳ್ಳಲಾಗಿದೆ. ಸಿಡಿ ಪ್ರಕರಣದಲ್ಲಿ ನನ್ನದೇನೂ ಪಾತ್ರವಿಲ್ಲ ಎಂದು ಪತ್ರದಲ್ಲಿ ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ.