ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ಚಿರತೆ ಹಾವಳಿ ಹೆಚ್ಚಾಗಿದೆ. ಇದರಿಂದ ರಾತ್ರಿ ಓಡಾಡುವುದಕ್ಕೆ ಜನರು ಭಯಭೀತರಾಗಿದ್ದಾರೆ. ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷಗೊಂಡಿದೆ.
ನಿನ್ನೆ ರಾತ್ರಿ ರಾಜಣ್ಣ ಎಂಬುವರ ಅಡಕೆ ತೋಟದಲ್ಲಿ ಚಿರತೆ ಓಡಾಡಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಿರತೆ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ರಾತ್ರಿ ವೇಳೆ ಓಡಾಡಲು ಗ್ರಾಮಸ್ಥರು ಭಯಪಡುವಂತಾಗಿದೆ.
ಕಳೆದ ತಿಂಗಳಷ್ಟೇ ಕೂಡ್ಲು ಅಪಾರ್ಟ್ ಬಳಿ ಚಿರತೆ ಕಾಣಿಸಿಕೊಂಡಿತ್ತು. ಚಿರತೆಯನ್ನ ಅರಣ್ಯ ಇಲಾಖೆ ಗುಂಡಿಕ್ಕಿ ಕೊಂದಿದ್ರು. ಇದೀಗ ನೆಲಮಂಗಲದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಜನರಿಗೆ ನಿದ್ದೆಗೆಡಿಸಿದಂತೆ ಆಗಿದೆ.