ಬೆಂಗಳೂರು ಬಿ.ಆರ್ ಪಾಟೀಲ್ ರಿಂದ ಸರ್ಕಾರಕ್ಕೆ ಮತ್ತೆ ತಲೆನೋವು ಆಗಿ ಬಿಂಬಿಸಿದೆ. ಬಿ.ಆರ್ ಪಾಟೀಲ್ ನೇರವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. 2013 ರಲ್ಲಿ ಕಾಮಗಾರಿಗಳನ್ನು ನಾನು ಕೆಆರ್.ಐಡಿಎಲ್ ಗೆ ನೀಡಿದ್ದೆ.
ಆದರೆ ಕಾರಣಾಂತರಗಳಿಂದ 2013 ರಲ್ಲಿ ನೀಡಿದ್ದ ಕಾಮಗಾರಿಗಳು ಪೂರ್ಣವಾಗಿಲ್ಲ.ಈ ಬಗ್ಗೆ ನಾನು ಕಳೆದ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿದಾಗ ನನ್ನನ್ನೇ ಅನುಮಾನದಿಂದ ನೋಡಲಾಯಿತು.ಪ್ರಿಯಾಂಕ ಖರ್ಗೆ ಅನುಪಸ್ಥಿತಿಯಲ್ಲಿ ಸಚಿವ ಕೃಷ್ಣ ಭೈರೇಗೌಡ ನನ್ನ ಮೇಲೆ ಅನುಮಾನ ಬರುವಂತೆ ಮಾತನಾಡಿದರು.
ಕೆಆರ್.ಐಡಿಎಲ್ ಕಡೆಯಿಂದ ನಾನು ಹಣಪಡೆದು ಭೂಸೇನೆಗೆ ಕಾಮಗಾರಿ ಕೊಟ್ಟಿದ್ದೇನೆ ಎಂದು ಅನುಮಾನ ಬರುವಂತೆ ಮಾತನಾಡಿದ್ದರು.ಅದಾದ ಮೇಲೂ ಕೂಡ ಪ್ರಿಯಾಂಕ ಖರ್ಗೆ ಕಾಮಗಾರಿಗಳ ಕುರಿತು ಸಭೆಯನ್ನು ನಡೆಸಲಿಲ್ಲ.ಇಂಥ ಆರೋಪಗಳನ್ನು ಹೊತ್ತುಕೊಂಡು ನಾನು ಅಧಿವೇಶನಕ್ಕೆ ಹಾಜರಾಗುವುದು ಸರಿಯಲ್ಲ.ಆರೋಪಗಳನ್ನು ಹೊತ್ತು ಸದನಕ್ಕೆ ಬಂದರೆ ನಾನು ಆರೋಪ ಒಪ್ಪಿಕೊಂಡಂತಾಗುತ್ತದೆ.ಹೀಗಾಗಿ ನನ್ನ ಮೇಲೆ ಬಂದ ಆರೋಪಗಳಿಗೆ ತನಿಖೆಯನ್ನು ನಡೆಸಿ.
ಸತ್ಯಾಸತ್ಯತೆ ಹೊರ ಬರಲು ತನಿಖೆಗೆ ಆದೇಶ ನೀಡಿ.ಆರೋಪ ಸಾಬೀತಾದರೆ ನಾನು ಎಂಎಲ್ಎ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದನಿದ್ದೇನೆ.ಪಂಚ ರಾಜ್ಯ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಾರದೆಂದು ಈಗ ಪತ್ರ ಬರೆಯುತ್ತಿದ್ದೇನೆ.ತಕ್ಷಣವೇ ತನಿಖಾ ಆಯೋಗ ರಚನೆ ಮಾಡಿ ಎಂದು ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.