ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಬಗ್ಗೆ ಪೊಲೀಸರು ಗಂಭೀರವಾಗಿ ಪರಿಗಣಿಸಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಮಾಧ್ಯಮದೊಂದಿಗೆ ಡಿಸಿಎಂ ಡಿಕೆಶಿವಕುಮಾರ್ ಮಾತನಾಡಿ ಅವರು, ಶಾಲೆಗಳಲ್ಲಿ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಬಂದಿದೆ ಎಂದು ತಿಳಿದು ನಾನು ನನ್ನ ಮನೆಯ ಹತ್ತಿರ ಇರುವ ಶಾಲೆಗೆ ಬಂದಿದ್ದೇನೆ. ಪೊಲೀಸ್ ಸಿಬ್ಬಂದಿ ಮತ್ತು ಬಾಂಬ್ ನಿಷ್ಕ್ರಿಯದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ” ಎಂದರು.
”ಈ ಹಿಂದೆಯೂ ಹಲವಾರು ಬಾರಿ ನಗರದ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಕರೆ, ಇ-ಮೇಲ್ ಬಂದಿತ್ತು. ಈ ನಿಟ್ಟಿನಲ್ಲಿ ಸ್ಥಳಕ್ಕೆ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯದಳದ ಸಿಬ್ಬಂದಿ ಇ-ಮೇಲ್ ಗಂಭೀರವಾಗಿ ಪರಿಗಣಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ ಶಾಲಾ ಆವರಣ ಸುತ್ತಮುತ್ತ ಪೊಲೀಸರು ನಿಗಾ ವಹಿಸಲಿದ್ದಾರೆ ಎಂದಿದ್ದಾರೆ.