ಹಾಸನ : ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಉದ್ಘಾಟನೆ ಹಿನ್ನೆಲೆ, ನಾನು ಕುಟುಂಬ ಸಮೇತ ಅಯೋಧ್ಯೆಗೆ ಹೋಗುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಹೇಳಿದರು.
ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಕುಟುಂಬ ಸಹಿತವಾಗಿ ನಾನು ಅಯೋಧ್ಯೆ ರಾಮ ಮಂದಿರಕ್ಕೆ ಹೋಗುತ್ತೇನೆ. ನಾನು, ನನ್ನ ಪತ್ನಿ, ಮಗ ಮತ್ತು ಅವರ ಪತ್ನಿ ಹಾಗೂ ನಿಖಿಲ್ ಮತ್ತು ಅವರ ಪತ್ನಿ ಹಾಗೇ ಮೊಮ್ಮಗನ ಜೊತೆ ಹೋಗುತ್ತೇವೆ ಎಂದರು. ಜನವರಿ 22ಕ್ಕೆ ವಿಶೇಷ ವಿಮಾನ ತಯಾರಗಿದ್ದು, ಅದರಲ್ಲೆ ಅಯೋಧ್ಯೆಗೆ ಹೋಗುತ್ತೇವೆ ಎಂದು ತಿಳಿಸಿದರು.