ರಾಯಚೂರು : ಸಂಸದ ಪ್ರತಾಪ್ ಸಿಂಹನಿಗೆ ಸೋಲುತ್ತೇನೆ ಎಂಬ ಭಯ ಶುರುವಾಗಿದೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಿಣಿ ಬಳಿಯ ಕಾಗಿನೆಲೆ ಪೀಠದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪ್ರತಾಪ್ ಸಿಂಹನಿಗೆ ಭಯ ಕಾಡುತ್ತಿದೆ ಎಂದಿದ್ದಾರೆ. ಟಿಕೆಟ್ ವಿಚಾರದ ಬಗ್ಗೆ ಯತೀಂದ್ರ ಹೇಳಿಲ್ಲ, ನಾನೂ ಹೇಳಿಲ್ಲ. ಸಚಿವ ಭೈರತಿ ಸುರೇಶ್ ಅಲ್ಲಿ ವೀಕ್ಷಕರಾಗಿ ಹೋಗಿದ್ದರು. ಅವರ ವರದಿ ಆಧಾರದಲ್ಲಿ ತೀರ್ಮಾನ ತೆಗೆದುಕೊಳುತ್ತೇನೆ ಎಂದು ಹೇಳಿದ್ದಾರೆ.
ಕ್ಷೇತ್ರದಲ್ಲಿನ ಎಂಎಲ್ಎಗಳು, ಎಕ್ಸ್ಎಂಎಲ್ಎಗಳು, ಎಂಪಿಗಳು, ಬ್ಲಾಕ್ ಕಮಿಟಿ ಅಧ್ಯಕ್ಷರು, ಅಭ್ಯರ್ಥಿಗಳಾಗಿದ್ದೋರು, ಜಿಲ್ಲಾ ಅಧ್ಯಕ್ಷರುಗಳು ಪ್ರಮುಖ ನಾಯಕರು ಅಭಿಪ್ರಾಯ ಮಾಡಲಾಗುತ್ತೆ. ಅವರು ಸೂಚಿಸುವವರಿಗೆ ಟಿಕೆಟ್ ಕೊಡುತ್ತೇವೆ ಎಂದಿದ್ದಾರೆ.
ನಾನು ಅಯೋಧ್ಯೆಗೆ ಹೋಗಲ್ಲ ಅಂತ ಏಲ್ಲೂ ಹೇಳಿಲ್ಲ. ಬಿಜೆಪಿ ಅವರು ರಾಜಕೀಯ ಮಾಡುತ್ತಿದ್ದಾರೆ. ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆಗೆ ನಮ್ಮ ಅಭ್ಯಂತ್ರವಿಲ್ಲ. ಆದರೆ ಬಿಜೆಪಿ ಅವರು ಅದನ್ನ ರಾಜಕೀಯವಾಗಿ ಬಳಸಿಕೊಳ್ಳುತ್ತಿರುವುದಕ್ಕೆ ನಮ್ಮ ವಿರೋಧವಿದೆ. ನಾನು ಎಲ್ಲೂ ಹೋಗಲ್ಲ ಅಂದಿಲ್ಲ ಎಂದಿದ್ದಾರೆ.