ಬೆಂಗಳೂರು : ಅನಧಿಕೃತ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ ತೆರವುಗೊಳಿಸದ ಬಿಬಿಎಂಪಿ ಮತ್ತು ರಾಜ್ಯ ಸರಕಾರದ ವಿರುದ್ಧ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಅನಧಿಕೃತ ಜಾಹೀರಾತು ಹಾವಳಿ ತಡೆಯಲು ಪಂಚವಾರ್ಷಿಕ ಯೋಜನೆಗೆ ಕಾಯುತ್ತಿದ್ದೀರಾ ಎಂದು ನ್ಯಾಯಾಲಯ ಪ್ರಶ್ನಿಸಿದೆ.
ಪಾಲಿಕೆ ಆದಾಯ ಹೆಚ್ಚಿಸಿಕೊಳ್ಳಲು ಸರ್ಕಾರದಿಂದ ಹೊಸ ಪ್ಲಾನ್ ಮಾಡಲಾಗಿದ್ದು, ಗ್ಯಾರಂಟಿ ಯೋಜನೆಗೆ ಬೇಕಾದ ಆದಾಯ ದಕ್ಕಿಸಿಕೊಳ್ಳಲು ಸರ್ಕಾರ ಚಿಂತನೆ ನಡೆಸಿದೆ. ಬಿಬಿಎಂಪಿ ಕಾಯ್ದೆ-2020 ಅನ್ವಯ ಜಾಹಿರಾತು ನಿಯಮ ಜಾರಿಗೆ ಚಿಂತನೆ ನಡೆಸಲಾಗಿದೆ. ಶೀಘ್ರದಲ್ಲಿ ಹೊಸ ರೂಪದಲ್ಲಿ ಜಾಹೀರಾತು ಬೈಲಾ ಜಾರಿ
ಇದೇ ತಿಂಗಳು 7 ರಂದು ಜಾಹೀರಾತು ಬಗ್ಗೆ ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರದ ಅಧಿಕಾರಿಗಳ ಸಭೆ ನಡೆಯಲಿದೆ. ಅನಧಿಕೃತ ಜಾಹೀರಾತಿಗೆ ಕಡಿವಾಣ ಹಾಕಿ, ಬಿಬಿಎಂಪಿ ಖಜಾನೆ ಭರ್ತಿ ಮಾಡಲು ಜಾಹೀರಾತು ಬೈಲಾಕ್ಕೆ ತಿದ್ದುಪಡಿಗೆ ಮುಂದಾಗಲಿದೆ.
ಹೈಕೋರ್ಟ್ ಆದೇಶ ಹಾಗೂ ಬಿಬಿಎಂಪಿ ಕೌನ್ಸಿಲ್ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಜಾಹೀರಾತು ಪ್ರದರ್ಶನ ಸಂಪೂರ್ಣ ನಿಷೇಧಿಸಲಾಗಿತ್ತು. ಆದ್ರು ಕೂಡ ರಾಜಕೀಯ ಪಕ್ಷಗಳು ಸೇರಿ ಖಾಸಗಿಯವರು ಎಲ್ಲೆಂದರಲ್ಲಿ ಫ್ಲೆಕ್ಸ್ , ಬ್ಯಾನರ್ಗಳನ್ನು ಅಳವಡಿಸ್ತಿದ್ರು, ಹೊಸ ಜಾಹೀರಾತು ನೀತಿಗೆ ಸ್ವಪಕ್ಷದ ಶಾಸಕರಿಂದಲೂ ಒತ್ತಡ ಹೇರಲಾಗಿತ್ತು. ಈಗ ಸರ್ಕಾರ ಹೊಸ ಜಾಹೀರಾತು ನಿಯಮ ಜಾರಿಯಾದ್ರೆ ಸರ್ಕಾರದ ಖಜಾನೆಗೆ 1 ಸಾವಿರ ಕೋಟಿ ವಾರ್ಷಿಕ ಆದಾಯದ ನಿರೀಕ್ಷೆ ಇದೆ ಎನ್ನುವ ಮಾತು ಕೇಳಿ ಬರುತ್ತಿದೆ.
ಇನ್ನೂ ಹೊಸ ಜಾಹೀರಾತು ಕಾಯ್ದೆಯಲ್ಲಿ ಎನ್ನೆಲ್ಲ ಮಾನದಂಡಗಳು ಇರುತ್ತೆ ಅಂತ ನೋಡೋದಾದ್ರೆ
ಮಾನದಂಡಗಳೇನು?
- ನಗರದಲ್ಲಿ ಯಾವ ಯಾವ ಪ್ರದೇಶದಲ್ಲಿ ಅವಕಾಶ ನೀಡಬೇಕು ?
- ಎಷ್ಟು ದರ ನಿಗದಿ ಮಾಡಬೇಕು?
- ಸದ್ಯ ಇರೋ ಪಿಪಿಪಿ ಮಾಡೆಲ್ ಗೆ ಯಾವ ನೀತಿ ಇರಬೇಕು ?
- ಹೋಲ್ಡಿಂಗ್ ಗಳಿಗೆ ಪ್ರತ್ಯೇಕ ನಿಯಮ ಜಾರಿ
- ಬಿಬಿಎಂಪಿಯಿಂದಲೇ ಜಾಹೀರಾತು ಸ್ಥಳ ನಿಗದಿ
- ಪ್ರತಿ ಜಾಹೀರಾತು ಹೋರ್ಡಿಂಗ್ಗೂ ಪ್ರತ್ಯೇಕ ಆರ್ಎಫ್ಐಡಿ ಸಂಖ್ಯೆ ನಿಗದಿ
- ನಿಗದಿತ ಹೋರ್ಡಿಂಗ್ ಗೆ ಜಿಪಿಎಸ್ ಅಳವಡಿಕೆಗೆ ತೀರ್ಮಾನ
- ನಿರ್ದಿಷ್ಟ ಜಾಹೀರಾತು ಫಲಕಕ್ಕೆ ಮಾತ್ರ ಅನುಮತಿಗೆ ತೀರ್ಮಾನ
- ಹರಾಜಿನ ಮೂಲಕ ಜಾಹೀರಾತು ಪ್ರದರ್ಶಕರಿಗೆ ಅನುಮತಿ