Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!CinemaState News

ಅತ್ತಿಗೆ ಮಲಗಿದವರು ಎದ್ದೇಳಲಿಲ್ಲ ಅಂತ : ನಟ ಶ್ರೀ ಮುರುಳಿ..

ಬೆಂಗಳೂರು : ಸ್ಪಂದನಾ ಸಾವಿನ ವಿಚಾರ ಕುರಿತಂತೆ ನಟ ಶ್ರೀಮುರಳಿ ಪ್ರತಿಕ್ರಿಯೆ ನೀಡಿದ್ದು,ಅಣ್ಣ ನನಗೆ ಕಾಲ್ ಮಾಡಿ ಹೇಳಿದ್ದು ಇಷ್ಟೆ. ಅತ್ತಿಗೆ ಮಲಗಿದವರು ಎದ್ದೇಳಲಿಲ್ಲ ಅಂತ. ಆಮೇಲೆ ಏನಾಯಿತು ಎನ್ನುವುದರ ಕುರಿತು ನಾಳೆಯೇ ಸ್ಪಷ್ಟತೆ ಸಿಗಲಿದೆ. ಅತ್ತಿಗೆಯ ಅಗಲಿಕೆ ಆಘಾತ ಮೂಡಿಸಿದೆ’ ಎಂದು ಹೇಳಿದರು.

ಸ್ಪಂದನಾ ಅವರು ಸಂಬಂಧಿಗಳ ಜೊತೆ ಪ್ರವಾಸಕ್ಕೆ ತೆರಳಿದ್ದರು. ಶೂಟಿಂಗ್ ಮುಗಿಸಿಕೊಂಡು ವಿಜಯ ರಾಘವೇಂದ್ರ ಕೂಡ ಅವರೊಂದಿಗೆ ಭಾಗಿಯಾಗಿದ್ದರು. ನಿನ್ನೆಯಷ್ಟೇ ಸ್ಪಂದನಾ ಅವರಿಗೆ ಹೃದಯಾಘಾತವಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಸರಿಯಾದ ಮಾಹಿತಿ ಇನ್ನೂ ಅವರ ಕುಟುಂಬಕ್ಕೆ ತಲುಪಿಲ್ಲ.

ಈಗಾಗಲೇ ವಿಜಯ ರಾಘವೇಂದ್ರ ಕುಟುಂಬ ಮತ್ತು ಸ್ಪಂದನಾ ಅವರ ಕುಟುಂಬ ಬ್ಯಾಂಕಾಕ್‌ಗೆ ತೆರಳಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ನಾಲ್ಕು ದಿನಗಳ ಹಿಂದೆಯಷ್ಟೇ ವಿಜಯ ರಾಘವೇಂದ್ರ ಪತ್ನಿ ಸ್ಪಂದನಾ ಅವರು ತನ್ನ ಕಾಲೇಜು ಸ್ನೇಹಿತರೊಂದಿಗೆ ಥಾಯ್ ಲ್ಯಾಂಡ್‍ಗೆ ಪ್ರವಾಸ ಹೋಗಿದ್ದರು. ಭಾನುವಾರ ಸಂಜೆ ಶಾಫಿಂಗ್ ಮುಗಿಸಿ ಹೋಟೇಲ್ ನತ್ತ ಹೋಗಬೇಕಾದರೆ ಸ್ಪಂದನಾ ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ನೇಹಿತರು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಅಷ್ಟರಲ್ಲಾಗಲೇ ಸ್ಪಂದನಾ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!