Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!Political NewsState News

ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಕೇಸ್ ಏನೆಂದರು ಖುಷ್ಬೂ ಸುಂದರ್ ?

ಉಡುಪಿ : ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಉಡುಪಿಗೆ ಆಗಮಿಸಿದ್ದು ಪ್ರಕರಣದ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಅವರ ಜೊತೆ ಸಭೆ ಮಾಡಿ ಮಾಹಿತಿ ಪಡೆದುಕೊಂಡರು.

ಇನ್ನೂ ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಖುಷ್ಬೂ ಸುಂದರ್, ಇದು ಒಂದು ಸೂಕ್ಷ್ಮ ವಿಚಾರವಾಗಿದ್ದು, ಇದನ್ನು ಯಾರು ರಾಜಕೀಕರಣಗೊಳಿಸಬಾರದು. ಪೊಲೀಸರಿಂದ ಮಾಹಿತಿ ಪಡೆದಿದ್ದೇನೆ. ತನಿಖೆ ಇನ್ನೂ ಮುಗಿದಿಲ್ಲ. ಇದು ತುಂಬಾ ಸಮಯ ತೆಗೆದುಕೊಳ್ಳುತ್ತದೆ. ಒಂದು ದಿನದಲ್ಲಿ ನಿರ್ಧಾರ ಮಾಡಲು ಆಗಲ್ಲ. ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ ಎಂದು ಹೇಳಿದರು.

ಕಾಲೇಜಿನವರು ಪತ್ರಿಕಾಗೋಷ್ಠಿ ಮಾಡಿ ವಿಡಿಯೋ ಡಿಲೀಟ್ ಬಗ್ಗೆ ಹೇಳಿದ್ದಾರೆ. ಆಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡುವವರು ಕಾನೂನು ಬಗ್ಗೆ ಅರ್ಥ ಮಾಡಿಕೊಳ್ಳಬೇಕು. ಯಾರು ವದಂತಿಗಳನ್ನು ಹರಡಬಾರದು. ಯುವತಿಯರ ರಕ್ಷಣೆ ನಮಗೆ ಮುಖ್ಯ. ಯುವತಿಯರು ನಮ್ಮ ಕುಟುಂಬದವರು. ಅವರ ಸಮಸ್ಯೆಗಳನ್ನು ಬಗೆಹರಿಸಬೇಕಾಗಿರುವುದು ಮುಖ್ಯ. ನಾನು ಧಾರ್ಮಿಕ ಅಥವಾ ರಾಜಕೀಯ ಮಾಡಲು ಇಲ್ಲಿ ಬಂದಿಲ್ಲ, ಒಬ್ಬ ಪೋಷಕರಾಗಿ ಇದನ್ನು ಬಗೆಹರಿಸಬೇಕು. ರಾಜಕಾರಣಿಗಳು ರಾಜಕೀಯ ಪಕ್ಷಗಳು ಇದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು ಎಂದರು.

ವಿದ್ಯಾರ್ಥಿಗಳು ನಮ್ಮ ದೇಶದ ಭವಿಷ್ಯ ಅವರನ್ನು ರಕ್ಷಣೆ ಮಾಡಬೇಕು. ನಾವು ಎಲ್ಲರೂ ಜವಾಬ್ದಾರಿಯಾಗಿ ವರ್ತಿಸಬೇಕು. ನಾನು ಯಾರನ್ನು ದೂಷಿಷಲು ಇಲ್ಲಿಗೆ ಬಂದಿಲ್ಲ. ನಾನು ಇಲ್ಲಿ ರಾಜಕಾರಣಿಯಾಗಿ ಬಂದಿಲ್ಲ. ಒಬ್ಬ ಮಹಿಳಾ ಆಯೋಗದ ಸದಸ್ಯೆಯಾಗಿ ಬಂದಿದ್ದೇನೆ. ಸಂತ್ರಸ್ತೆ ಹಾಗೂ ಆರೋಪಿಗಳನ್ನು ಭೇಟಿ ಮಾಡುತ್ತೇನೆ. ಅವರು ಯಾವ ಕಾರಣಕ್ಕೆ ವಿಡಿಯೋ ಮಾಡಿದರ ? ಯಾರಾದರೂ ಹೇಳಿದಕ್ಕೆ ವಿಡಿಯೋ ಮಾಡಿದ್ದಾರಾ? ವಿಡಿಯೋ ತಮಾಷೆಗೆ ಮಾಡಿದ್ದ? ಈ ಬಗ್ಗೆ ಅವರಿಂದ ಮಾಹಿತಿ ಪಡೆಯುತ್ತೇನೆ. ಸದ್ಯ ಸಾಮಾಜಿಕ ಜಾಲತಾಣ ತಾಂತ್ರಿಕತೆಯಿಂದ ಪ್ರತಿಯೊಬ್ಬರು ತನಿಖಾಧಿಕಾರಿ ನ್ಯಾಯಾಧೀಶರಾಗಲು ಮುಂದಾಗಿದ್ದಾರೆ. ಇದನ್ನು ಯಾರು ಮಾಡಬೇಡಿ . ವದಂತಿಗಳನ್ನು ಯಾರು ಹರಡಬೇಡಿ. ಕಾನೂನಿಗೆ ಅದರ ಕೆಲಸ ಮಾಡಲು ಬಿಡಿ ಎಂದು ತಿಳಿಸಿದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!