Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!Political NewsState News

ಆಟೋ ಚಾಲಕರ ಸಭೆ ಬಳಿಕ ಸಚಿವ ರಾಮಲಿಂಗಾರೆಡ್ಡಿ ಈ ರೀತಿ ಹೇಳಿದ್ಯಾಕೆ?

ಬೆಂಗಳೂರು : ಖಾಸಗಿ ವಾಹನ ಚಾಲಕ ಮತ್ತು ಮಾಲಿಕರ ಜೊತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಶಾಂತಿನಗರದ ಸಾರಿಗೆ ‌ಇಲಾಖೆ ಮುಖ್ಯ ಕಚೇರಿಯಲ್ಲಿ ಸಭೆ ನಡೆಸುತ್ತಿದ್ದಾರೆ. ಆದರೆ ಸಭೆಯಲ್ಲಿ ಓಲಾ, ಉಬರ್ ಸಂಸ್ಥೆಗಳು ಮಾತ್ರ ಭಾಗಿಯಾಗಿವೆ.

ಆಟೋ, ಖಾಸಗಿ ಬಸ್, ಟ್ಯಾಕ್ಸಿ ಚಾಲಕರ ಜೊತೆ ಪ್ರತ್ಯೇಕ ಸಭೆ ನಡೆಸುವುದಾಗಿ ತಿಳಿಸಿದ ಹಿನ್ನೆಲೆ ಸಾರಿಗೆ ಒಕ್ಕೂಟದಿಂದ ಎಲ್ಲರೂ ಬಂದ್​ಗೆ ಕರೆ ಕೊಟ್ಟಿದ್ದೇವೆ. ಹೀಗಾಗಿ ಒಟ್ಟಿಗೆ ಸಭೆ ಕರೆಯುವಂತೆ ಆಗ್ರಹಿಸಿವೆ.

ಓಲಾ, ಉಬರ್​ನಿಂದ ಸಮಸ್ಯೆಯಾಗುತ್ತಿದೆ ಅಂತಾ ತಿಳಿಸಿದ್ದಾರೆ. ರ್ಯಾಪಿಡೋ ವಿಚಾರವಾಗಿ ನ್ಯಾಯಾಲಯದಲ್ಲಿ ತಡೆಯಾಜ್ಞೆ ಇದೆ ಎಂದು ಆಟೋ ಚಾಲಕರ ಸಭೆ ಬಳಿಕ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ವಿಮೆ ಮಾಡಿಸಬೇಕು ಅಂತಾ ಚಾಲಕರು ಮನವಿ ಮಾಡಿದ್ದಾರೆ. ಚಾಲಕರ ದಿನಾಚರಣೆ ಮಾಡಲು ಕೋರಿದ್ದಾರೆ. ಕಾನೂನುಬಾಹಿರ ಆ್ಯಪ್‌ಗಳನ್ನು ಬ್ಯಾನ್ ಮಾಡುವಂತೆ ಕೋರಿದ್ದಾರೆ, ಏರ್​ಪೋರ್ಟ್​ ಬಳಿ ಇಂದಿರಾ ಕ್ಯಾಂಟೀನ್ ಓಪನ್​ಗೆ ಬೇಡಿಕೆ ಇದೆ.

ಜಾಗ ಕೊಟ್ಟರೆ ಕೂಡಲೇ ಇಂದಿರಾ ಕ್ಯಾಂಟೀನ್​ ಓಪನ್ ಮಾಡುತ್ತೇವೆ. ಖಾಸಗಿ ಬಸ್​ಗಳ ಚಾಲಕರು ಕೂಡ ಸಮಸ್ಯೆ ಹೇಳಿಕೊಂಡಿದ್ದಾರೆ. ವಾಹನಗಳ ಮೇಲೆ ಬ್ಲಾಕ್ ಲಿಸ್ಟ್ ತೆಗೆಯಲು ಅದಾಲತ್ ಮಾಡುತ್ತೇವೆ ಎಂದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!