ಬೆಂಗಳೂರು : ವಿಪಕ್ಷ ನಾಯಕರಾಗಿ ಮಾಜಿ ಸಚಿವ ಆರ್ ಅಶೋಕ್ ಆಯ್ಕೆ ಬೆನ್ನಲ್ಲೆ ಪಕ್ಷದ ಹಿರಿಯ ಮುಖಂಡರು ಸೇರಿ ಹಲವರು ಆರ್ ಅಶೋಕ್ ಅವರಿಗೆ ಶುಭ ಹಾರೈಸಿದ್ದಾರೆ.
ಬೆಂಗಳೂರಿನಲ್ಲಿಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿ, ವಿಧಾನಸಭೆ ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾಗಿರುವ ಮಾಜಿ ಉಪ ಮುಖ್ಯಮಂತ್ರಿಗಳು ಹಾಗೂ ಪದ್ಮನಾಭನಗರ ಕ್ಷೇತ್ರದ ಶಾಸಕರಾದ ಅಶೋಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅಶೋಕ್ ಅವರು ಕಾಂಗ್ರೆಸ್ ಸರಕಾರದ ದುರಾಡಳಿತದ ವಿರುದ್ಧ ಪ್ರಬಲ ಹೋರಾಟ ನಡೆಸುವುದರ ಜತೆಗೆ, ರಾಜ್ಯದ ಜನರ ದನಿಯಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಲಿ ಎಂದು ಹಾರೈಸುತ್ತೇನೆ.