Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!State News

ನಕಲಿ ದಾಖಲೆ ಸೃಷ್ಟಿಸಿ ಆಯುರ್ವೇದ ಕಾಲೇಜು ಸ್ಥಾಪನೆ: ಡಾ ನಂದೀಶ ಆರೋಪ

ಬೆಳಗಾವಿ : ರಾಜೀವ ಗಾಂಧಿ ಆರೋಗ್ಯ ಮತ್ತು ವಿಜ್ಞಾನ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯರಾದ ಆನಂದ ಕಿರಶ್ಯಾಳ ಅವರು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಕಾನೂನು ನಿಯಮಗಳನ್ನು ಗಾಳಿಗೆ ತೂರಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಪಟ್ಟಣದಲ್ಲಿ ಆಯುರ್ವೇದ ಕಾಲೇಜು ನಿರ್ಮಾಣ ಮಾಡಿದ್ದಾರೆ. ಇದರಲ್ಲಿ ಹಲವು ಅಧಿಕಾರಿಗಳು ಶ್ಯಾಮಿಲಾಗಿದ್ದಾರೆ. ಕೆಲವು ಹಿರಿಯ ಅಧಿಕಾರಿಗಳೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದ್ದಾರೆ , ನಕಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಬಗ್ಗೆ ಜಿಲ್ಲಾಧಿಕಾರಿಗಳು ತನಿಖೆ ಮಾಡಬೇಕೆಂದು ತೇರದಾಳ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ ನಂದೀಶ ತೇರದಾಳ ಅವರು ಆರೋಪಿಸಿದರು.

ಅವರು ರವಿವಾರ ಅಥಣಿ ಪಟ್ಟಣ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡುತ್ತಾ, ಅಥಣಿ ಪಟ್ಟಣದಲ್ಲಿ ಶ್ರೀ ಹೇಮರಡ್ಡಿ ಮಲ್ಲಮ್ಮ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಆನಂದ ಕಿರಶ್ಯಾಳ ಹಾಗೂ ಗ್ರಾಮ ಪಂಚಾಯತ ಸಂಕೋನಟ್ಟಿ ಅಭಿವೃದ್ದಿ ಅಧಿಕಾರಿ ಸೇರಿ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡದೆ, ಪಂಚಾಯತಿಯಲ್ಲಿ ದಾಖಲು ಮಾಡದೆ, ಕಟ್ಟಡ ಪರವಾಣಿಗೆ ಪ್ರಮಾಣ ಪತ್ರ ಸೇರಿ ಇತರ ಪ್ರಮಾಣ ಪತ್ರಗಳನ್ನು ಸಕಲಿಯಾಗಿ ಸೃಷ್ಟಿಸಿ ಸರಕಾರಕ್ಕೆ ಮೋಸ ಮಾಡಿ ತೆರಿಗೆ ವಂಚಿಸಿ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ ಕಾಲೇಜು ನಿರ್ಮಾಣ ಮಾಡಿದ್ದಾರೆ, ಹೇಮರಡ್ಡಿ ಮಲ್ಲಮ್ಮ ಶಿಕ್ಷಣ ಸಂಸ್ಥೆಯ ಹೆಸರಿನಲ್ಲಿ ನಕಲಿ ದಾಖಲಾತಿಗಳನ್ನು ಸೃಷ್ಠಿಸಿ ಆಯುರ್ವೇದ ಕಾಲೇಜನ್ನು ಪ್ರಾರಂಭಿಸಲು ಮುಂದಾಗಿದ್ದಾರೆ. ಕಾಲೇಜಿಗೆ ಬೇಕಾದ ಪರವಾನಿಗೆಯನ್ನು ಪಡೆಯಲು ಆನಂದ ಕಿರಶ್ಯಾಳ ಅವರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿರುತ್ತಾರೆ, ಸಂಸ್ಥೆಯ ಹೆಸರಿನಲ್ಲಿ ಆಸ್ತಿ ದಾಖಲಾತಿಯಿಲ್ಲ, ಪ್ಲ್ಯಾನಿಂಗ್, ನಮೂನೆ 09 ಕೂಡ ಪಡೆಯದೇ ಕಾಲೇಜು ಪ್ರಾರಂಭ ಮಾಡುತ್ತಿರುವುದು ಬ್ರಷ್ಟಾಚಾರಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಆರೋಪಿಸಿದರು.

ಮುಂದುವರೆದು ಮಾತನಾಡಿ ಆನಂದ ಕಿರಶ್ಯಾಳ ಅವರು ಬೆಂಗಳೂರಿನ ರಾಜೀವ ಗಾಂಧಿ ಆರೋಗ್ಯ ಮತ್ತು ವಿಜ್ಞಾನ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯರಾಗಿ ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಅವರನ್ನು ಕೂಡಲೇ ಆ ಸದಸ್ಯತ್ವದಿಂದ ತೆಗೆದುಹಾಕಬೇಕು ಎಂದು ರಾಜ್ಯಪಾಲರಿಗೆ ಮನವಿ ಸಲ್ಲಿಸುತ್ತೆನೆ ಮತ್ತು ಕಾನೂನು ಬಾಹಿರವಾಗಿ 05 ವರ್ಷ ಆಸ್ಪತ್ರೆಯ ಉದ್ದಿಮೆ ಪರವಾನಿಗೆ ಪ್ರಮಾಣ ಪತ್ರ ಪಡೆದಿದ್ದಾರೆ. ಸರಕಾರಕ್ಕೆ ಶಿಕ್ಷಣ ಸಂಸ್ಥೆಯ ಹೆಸರಿನಲ್ಲಿ ಯಾವುದೇ ಕಂದಾಯವನ್ನು ಸಂದಾಯ ಮಾಡದೆ ಸರಕಾರದ ಬೊಕ್ಕಸಕ್ಕೆ ಸಂಸ್ಥೆಯವರು ಹಾಗೂ ಇತರೆ ಅಧಿಕಾರಿಗಳು ಬ್ರಷ್ಟಾಚಾರ ಮಾಡಿ ನಷ್ಟವನ್ನು ಉಂಟುಮಾಡಿದ್ದಾರೆ, ಇಂತಹ ಶಿಕ್ಷಣ ಸಂಸ್ಥೆಯ ದಾಖಲೆಗಳನ್ನು ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ ಸಿಇಓ ಅವರು ಪರಿಶೀಲಿಸಿ ಸೂಕ್ತ ಕಾನೂನು‌ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಸತ್ಯಾಗ್ರಹ ಹಮ್ಮಿಕೊಳ್ಳುತ್ತೆನೆ ಎಂದು ಹೇಳಿದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!