Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!

Breaking News- ಬಿಹಾರದಲ್ಲಿ ಬಿಜೆಪಿ-ಜೆಡಿಯು ಮೈತ್ರಿ ಸರ್ಕಾರ ಪತನ- ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ( NITISH KUMAR ) ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿರುವ ನಿತೀಶ್ ಕುಮಾರ್ ರಾಜೀನಾಮೆ ಪತ್ರ ನೀಡಿದ್ದಾರೆ. ಬಿಜೆಪಿ( BJP ) ಯೊಂದಿಗಿನ ಮೈತ್ರಿಯನ್ನು ಮುರಿದುಕೊಂಡಿರುವ ಜೆಡಿಯು ಅಧ್ಯಕ್ಷ ಹಾಗೂ ಸಿಎಂ ನಿತೀಶ್ ಕುಮಾರ್ ತೇಜಸ್ವಿ ಯಾದವ್ ಅವರೊಂದಿಗೆ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ.

ರಾಜ್ಯಪಾಲರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿರುವ ನಿತೀಶ್ ಕುಮಾರ್ ನಿರ್ಧಾರದಿಂದಾಗಿ ಬಿಜೆಪಿ- ಜೆಡಿಯು ಮೈತ್ರಿ ಸರ್ಕಾರ ಪತನವಾಗಿದೆ.ಇದೇ ವೇಳೆ ಹೊಸ ಸರ್ಕಾರ ರಚನೆಗೆ ರಾಜ್ಯಪಾಲರ ಬಳಿ ಅವಕಾಶ ಕೋರಿದ್ದಾರೆ. ರಾಜೀನಾಮೆ ಸಲ್ಲಿಕೆ ಬೆನ್ನಲ್ಲೇ 160 ಮಂದಿ ಶಾಸಕರ ಬೆಂಬಲ ಪತ್ರವನ್ನ ನೀಡಿದ್ದಾರೆ. ಈ ಮೂಲಕ ಹೊಸ ಸರ್ಕಾರ ರಚನೆಗೆ ಅವಕಾಶ ಕೋರಿದ್ದಾರೆ.

ಬಿಜೆಪಿ ಜೊತೆ ಮೈತ್ರಿ ಮುರಿದುಕೊಂಡಿರುವ ನಿತೀಶ್ ಕುಮಾರ್ ಮತ್ತೊಮ್ಮೆ ಮಹಾಘಟಬಂಧನ್ ಮೂಲಕ ಹೊಸ ಸರ್ಕಾರ ರಚಿಸಲು ಮುಂದಾಗಿದ್ದಾರೆ. ರಾಜಿನಾಮೆ ಬಳಿಕ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಅವರ ಮನೆಗೆ ತೆರಳಿದ ನಿತೀಶ್ ಕುಮಾರ್ ಅವರು ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಪತ್ನಿ ರಾಬ್ರಿ ದೇವಿ ಅವರನ್ನು ಭೇಟಿ ಮಾಡಿದರು. ಜಿತನ್ ರಾಮ್ ಮಾಂಝಿ ನೇತೃತ್ವದ ಹಿಂದೂಸ್ತಾನಿ ಅವಾಮ್ ಮೋರ್ಚಾ ನಿತೀಶ್ ಕುಮಾರ್ ಮತ್ತು ಮಹಾಘಟಬಂಧನ್ ಗೆ ಬೇಷರತ್ ಬೆಂಬಲ ಘೋಷಿಸಿದ್ದಾರೆ.

ಇದನ್ನೂ ಓದಿ : –  ಬಿಹಾರದಲ್ಲಿ ಮಹಾಘಟಬಂಧನ್ 2.0- ನೂತನ ಸರ್ಕಾರದಲ್ಲಿ ತೇಜಸ್ವಿ ಯಾದವ್ ಡಿಸಿಎಂ?

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!