ಮೈಸೂರು : ಮೈಸೂರಿನ ಕಿದ್ವಾಯಿ ಆಸ್ಪತ್ರೆಯ ಶಂಕು ಸ್ಥಾಪನೆಯಲ್ಲಿ ʻಬೂಟು ಧರಿಸಿಯೇ ʼ ಸಿಎಂ ಸಿದ್ದರಾಮಯ್ಯ (CM Siddaramaiah) ಭೂಮಿ ಪೂಜೆ ನೆರವೇರಿಸಿದ್ದಾರೆ.
ಇಂದು ಬರೊಬ್ಬರಿ 49 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಮೈಸೂರಿನಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ಶಂಕುಸ್ಥಾಪನೆ ನೆರವೇರಿದೆ. ಈ ಸಂದರ್ಭದಲ್ಲ ʻಬೂಟು ಧರಿಸಿಯೇ ʼ ಸಿಎಂ ಸಿದ್ದರಾಮಯ್ಯ ಭೂಮಿ ಪೂಜೆ ನೆರವೇರಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಸಾಥ್ ನೀಡಿದ್ದಾರೆ.
ಅಷ್ಟೇ ಅಲ್ಲದೇ ಕೆ ಹರೀಶ್ ಗೌಡ, ಅನಿಲ್ ಚಿಕ್ಕಮಾದು, ರವಿಶಂಕರ್, ವಿಧಾನಪರಿಷತ್ ಸದಸ್ಯರಾದ ಡಾ ತಿಮ್ಮಯ್ಯ, ಸಿ ಎನ್ ಮಂಜೇಗೌಡ, ಮರಿತಿಬ್ಬೆಗೌಡ, ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ. ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಡೀನ್ ಡಾ.ಅಶೋಕ್, ಮೈಸೂರು ಮೆಡಿಕಲ್ ಕಾಲೇಜು ಡೀನ್ ಡಾ ದಾಕ್ಷಾಯಿಣಿ ಸೇರಿದಂತೆ ಹಲವರು ಭಾಗಿಯಾಗಿದ್ದರು.