ಬೆಂಗಳೂರು: ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದಲ್ಲಿ ಇಂದು ಮೆಗಾ ಜನತಾ ದರ್ಶನ ನಡೆಸುತ್ತಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿದ್ದ ಜನತಾ ದರ್ಶನಕ್ಕೆ ಸಾವಿರಾರು ಜನ ಬಂದು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳುತ್ತಿದ್ದಾರೆ. ಕೆಲವರಿಗೆ ಸಿಎಂ ಅವರು ಕೂತಲ್ಲೇ ಪರಿಹಾರ ನೀಡಿ ಸ್ಪಂದಿಸುತ್ತಿದ್ದಾರೆ.
ಜನತಾ ದರ್ಶನಕ್ಕಾಗಿ ವಿಶೇಷ ಚೇತನರು, ಹಿರಿಯ ನಾಗರಿಕರು ಸೇರಿದಂತೆ 20 ಕೌಂಟರ್ಗಳನ್ನ ಮಾಡಲಾಗಿದೆ. 1000ಕ್ಕೂ ಹೆಚ್ಚು ಅಧಿಕಾರಿಗಳು ಭಾಗಿಯಾಗಿದ್ದಾರೆ. ಇಂದು, ಮೊದಲಿಗೆ ವಿಶೇಷ ಚೇತನರ ಕೌಂಟರ್ ಬಳಿ ತೆರಳಿದ ಸಿಎಂ ಸಿದ್ದರಾಮಯ್ಯ ಅಲ್ಲಿ ಸಮಸ್ಯೆ ಆಲಿಸಿ, ಅಹವಾಲು ಸ್ವೀಕರಿಸಿದ್ರು. 148 ಮಂದಿ ವಿಶೇಷ ಚೇತನರು ಮೂರು ಚಕ್ರ ವಾಹನಕ್ಕೆ ಬೇಡಿಕೆ ಸಲ್ಲಿಸಿದ್ರು. ಬಳಿಕ ಸಿಎಂ ಸಿದ್ದರಾಮಯ್ಯ ತ್ರಿಚಕ್ರ ವಾಹನ ಕೊಡಿಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು, ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾತ್ ಅವರಿಗೆ ಖಡಕ್ ಸೂಚನೆ ನೀಡಿದ್ರು.