ಬೆಂಗಳೂರು : ಇಂದು ಕರ್ನಾಟಕದ ಸಿಎಂ ಸಿದ್ದರಾಮಯ್ಯ (CM Siddaramaiah) ಮೈಸೂರು ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವರದಿಯಾಗಿದೆ.
ಇಂದು ಮದ್ಯಾಹ್ನ 12.55ಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನ ಮೂಲಕ ಮೈಸೂರಿನ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ. 2 ಗಂಟೆಗೆ ರಸ್ತೆಯ ಮೂಲಕ ನಂಜನಗೂಡಿಗೆ ಭೇಟಿ ನೀಡಲಿದ್ದಾರೆ. 2.30ಕ್ಕೆ ಕನಕದಾಸರ ಸಾರ್ವಜನಿಕ ವಿದ್ಯಾರ್ಥಿ ನಿಲಯ ಉದ್ಘಾಟನೆ ಮಾಡಲಿದ್ದಾರೆ. 3 ಗಂಟೆಗೆ ಕಳಲೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಕಡೇಮಾಲಮ್ಮ ದೇವಸ್ಥಾನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.