ಸಿಡಿ ಷಡ್ಯಂತರದಲ್ಲಿ ರಾಜ್ಯದ ನೂರಾರು ನಾಯಕರು, ಅಧಿಕಾರಿಗಳು, ಬೆಂಗಳೂರಿನ ಉನ್ನತ ಅಧಿಕಾರಿಗಳು ಸಿಲುಕಿದ್ದಾರೆ. ನನ್ನ ಬಳಿ 120 ಸಾಕ್ಷ್ಯಗಳಿವೆ, ಯಾವುದನ್ನೂ ಬಿಡುಗಡೆ ಮಾಡಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ (RAMESH JARKIHOLI) ತಿಳಿಸಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (D K Shivakumar) ಸಿಡಿ ತಯಾರಿಸಿ ಬ್ಯ್ಲಾಕ್ ಮೇಲ್ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ದಯವಿಟ್ಟು ಇದನ್ನು ಸಿಬಿಐ ತನಿಖೆಗೆ ಕೊಡಬೇಕು ಎಂದು ಮಾಜಿ ಸಚಿವ ರಮೇಶ ಜಾರಕಿಹೋಳಿ (Ramesh Jarkiholi) ಒತ್ತಾಯಿಸಿದ್ದಾರೆ. ಮಹಾನಾಯಕನ ಷಡ್ಯಂತ್ರ ಬಯಲುಗೊಳಿಸುವುದೇ ನನ್ನ ಟಾರ್ಗೆಟ್ ಎಂದು ಶಪಥ ಮಾಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಡಿಕೆ ಶಿವಕುಮಾರ್ ನನ್ನನ್ನು ಟಾರ್ಗೆಟ್ ಮಾಡಿ ನನ್ನನ್ನು ಹೊಡೆದರು. ರಾಜಕಾರಣ ಮಾಡಲು ಡಿ.ಕೆ.ಶಿವಕುಮಾರ್ ನಾಲಾಯಕ್ ಎಂದು ವಾಗ್ದಾಳಿ ನಡೆಸಿದ್ರು. ಇದನ್ನು ಓದಿ :-ಭಾವನಾತ್ಮಕವಾಗಿ ಟ್ವೀಟ್ ಮಾಡಿ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಸೂರಜ್ ರೇವಣ್ಣ
ಡಿ.ಕೆ ಶಿವಕುಮಾರ್ ಸಿಡಿ ಬಿಡುಗಡೆ ಮಾಡಿ ನನ್ನ ವೈಯಕ್ತಿಕ ಜೀವನ ಹಾಳುಮಾಡಿದ. ಒಬ್ಬ ಮಹಿಳೆ ಮೂಲಕ ನನ್ನ ತೇಜೋವದೆ ಮಾಡಿದ. ಮಾರ್ಚ್ 21ರಂದು ನನ್ನ ಸಿಡಿ ಬಿಡುಗಡೆ ಮಾಡಿ ಹೆಸರು ಕೆಡಿಸಿದ. ನಾನು ಯಾವುದೆ ತಪ್ಪು ಮಾಡದಿದ್ದರೂ ಒಪ್ಪಿಕೊಳ್ಳಬೇಕಾಯಿತು. ಸಿಡಿ ಪ್ರಕರಣದ ಯುವತಿ, ನರೇಶ್ ಸೇರಿದಂತೆ 6 ಜನರನ್ನು ಬಂಧಿಸಿ. ಪ್ರಕರಣದ ತನಿಖೆ ಸಿಬಿಐಗೆ ವಹಿಸುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತನೇ. ಎಲ್ಲಾ ದಾಖಲೆಗಳನ್ನು ಸಿಬಿಐಗೆ ನೀಡುತ್ತೇನೆ ಎಂದು ಸಾಹುಕಾರ್ ಗುಡುಗಿದ್ದಾರೆ.
ನನ್ನ ಸಂಬಂಧ ಹಳಸಲು ಓರ್ವ ವಿಷಕನ್ಯೆ ಕಾರಣ
ನಾನು ಡಿಕೆಶಿ ಅಣ್ಣ ತಮ್ಮಂದಿರಂತೆ ಇದ್ದೇವು. ನಮ್ಮಿಬ್ಬರ ಸಂಬಂಧ ಹಳಸಲು ಓರ್ವ ವಿಷ ಕನ್ಯೆ ಕಾರಣ ಎಂದು ರಮೇಶ್ ಜಾರಕಿಹೊಳಿ ಗಂಭೀರ ಆರೋಪ ಮಾಡಿದ್ದಾರೆ. ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ (LAKSHMI HEBALKHAR ) ಅವರನ್ನ ವಿಷಕನ್ಯೆ ಎಂದು ಕರೆದಿದ್ದಾರೆ. ಈ ‘ವಿಷಕನ್ಯೆ’ಯಿಂದ ಕಾಂಗ್ರೆಸ್ ಸರ್ವನಾಶವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
1985 ರಲ್ಲಿ ನಾನು ಮತ್ತು ಡಿ.ಕೆ ಶಿವಕುಮಾರ್ ಇಬ್ಬರು ಒಟ್ಟಿಗೆ ಕಾಂಗ್ರೆಸ್ ನಿಂದ ಚುನಾವಣೆಗೆ ಸ್ಪರ್ಧಿಸಿದೆವು, ಇಬ್ಬರು ಸೋತೆವು, ಆಗ ಆತ ಹರಿದ ಚಪ್ಪಲಿ, HMT ವಾಚ್ ಹಾಕಿದ್ದ, ಈಗ ಕೋಟ್ಯಂತರ ರುಪಾಯಿ ಸಂಪಾದನೆ ಮಾಡಿ ರಾಜ್ಯವನ್ನೇ ಲೂಟಿ ಮಾಡಿದ್ದಾನೆ ಎಂದು ತಿಳಿಸಿದ್ದಾರೆ. ಡಿಕೆ ಶಿವಕುಮಾರ್ ಅವರ ಗರ್ಲ್ ಫ್ರೆಂಡ್ ಎಂದು ಜಾರಕಿಹೊಳಿ ಆರೋಪ ಮಾಡಿದ್ದಾರೆ.
ಇದನ್ನು ಓದಿ :- ಇಂದು ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭ.. ರಾಹುಲ್ ಗಾಂಧಿ ನಡೆದು ಬಂದ ಹಾದಿ ಇಲ್ಲಿದೆ…