ಹಾಸನ: ಇತಿಹಾಸ ಪ್ರಸಿದ್ದ ಹಾಸನಂಬ ದೇವಾಲಯದ ಬಾಗಿಲು ನವೆಂಬರ್ 2 ರಿಂದ 15ರವರೆಗೆ ತೆರೆಯಲಾಗಿದ್ದು, ಹಾಸನಂಬ ದರ್ಶನ ಮಾಡಲು ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ.
ವರ್ಷಕ್ಕೆ ಒಮ್ಮೆ ಬಾಗಿಲು ತೆರೆದು ದರ್ಶನ ನೀಡುವ ಹಾಸನಾಂಬ ದೇವಾಲಯದ ಜಾತ್ರಾ ಮಹೋತ್ಸವ ಇನ್ನೇನು ಕೇಲವೆ ದಿನಗಳಲ್ಲಿ ಆರಂಭವಾಗಲಿದೆ. ಇದನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ಯಾವುದೇ ಅಪಚಾರ ಆಗದಂತೆ ಆಚರಿಸಲು ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಸಹಕಾರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಹೇಳಿದರು.