ಬೆಂಗಳೂರು : ನಾಳೆ ಭಾರತ ನೆದರ್ಲ್ಯಾಂಡ್ ಕ್ರಿಕೆಟ್ (India Vs Netherlands) ಪಂದ್ಯಾವಳಿ ಹಿನ್ನಲೆ ಬೆಂಗಳೂರು ನಗರದಾದ್ಯಂತ ಪೊಲೀಸರಿಂದ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕೇಂದ್ರ ವಿಭಾಗ ಡಿಸಿಪಿ ಶೇಖರ್ ಹೆಚ್.ಟಿ ತಿಳಿಸಿದ್ದಾರೆ.
ಕೇಂದ್ರ ವಿಭಾಗ ಡಿಸಿಪಿ ಶೇಖರ್ ಹೆಚ್.ಟಿ. ಮಾಧ್ಯಮದೊಂದಿಗೆ ಮಾತನಾಡಿ, ಬೆಂಗಳೂರಲ್ಲಿ ಒಟ್ಟು ಐದು ಪಂದ್ಯ ನಿಗಧಿಯಾಗಿತ್ತು. ಈಗಾಗಲೇ ನಾಲ್ಕು ಪಂದ್ಯಗಳು ಮುಗಿದಿದೆ. ಐದನೇ ಪಂದ್ಯ ನಾಳೆ ನಡೆಯಲಿದೆ. ಈ ನಿಟ್ಟಿನಲ್ಲಿ ನಗರದ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತ ಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. 9 ಜನ ಎಸಿಪಿ 28 ಇನ್ಸ್ ಪೆಕ್ಟರ್ 86 ಜನ ಪಿಎಸ್ಐ, ಸೇರಿದಂತೆ ಒಂದು ಸಾವಿರಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. 4 ಕೆಎಸ್ ಆರ್ ಪಿ ತುಕಡಿ,2 ಡಿ ಸ್ವಾಟ್ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ವಿದ್ವಾಂಸಕ ಕೃತ್ಯ ತಡೆಗಟ್ಟಲು 7 ವಿಶೇಷ ತಂಡಗಳನ್ನು ನಿಯೋಜನೆ ಮಾಡಲಾಗಿದೆ. ಎಲ್ಲಾ ಗೇಟ್ ಬಳಿ ವಿದ್ವಾಂಸಕ ಕೃತ್ಯ ತಪಾಸಣೆ ಕೈಗೊಳ್ತೇವೆ ಟಿಕೆಟ್ ಹಿಂದೆ ನಮೂದಿಸಿರುವ ನಿಯಮಗಳನ್ನು ಪಾಲಿಸಬೇಕು ಎಂದಿದ್ದಾರೆ.