Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!Political NewsState News

ಧರ್ಮ ದಂಗಲ್ ಪದ ಬಳಕೆಗೆ ಸಚಿವ ಲಾಡ್ ಗರಂ

ಧಾರವಾಡ : ಹಿಜಾಬ್ ನಿಷೇಧ ಆದೇಶ ವಾಪಸ್ ಪಡೆಯುವ ಬಗ್ಗೆ ಸಿಎಂ ಹೇಳಿಕೆ ನೀಡಿರುವುದಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಸಚಿವ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದು, ಹಿಜಾಬ್ ಹಾಗೂ ಇನ್ನಿತರ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಧರ್ಮ ದಂಗಲ್ ಎಂಬ ಪದ ಬಳಸುತ್ತಿವೆ.ಅದು ದಂಗಲ್ ಹೇಗೆ ಆಗುತ್ತದೆ. ಸಿಎಂ ಹೇಳಿದ್ದು ಕಾನೂನಾತ್ಮಕವಾಗಿ ಇದೆ. ಅದಕ್ಕೆ ದಂಗಲ್ ಎಂಬ ಪದ ಬಳಸಿ ಏಕೆ ಹೇಳುತ್ತೀರಿ ಎಂದು ಮಾಧ್ಯಮಗಳ ಮೇಲೆ ಗರಂ ಆದ ಪ್ರಸಂಗ ನಡೆಯಿತು.

ನಗರದಲ್ಲಿ‌‌ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಧರ್ಮ ದಂಗಲ್ ಎಂದರೆ ಏನು? ಅದರಲ್ಲಿ ಧರ್ಮ ದಂಗಲ್ ಏನಾಗಿದೆ? ಪದೇ ಪದೇ ಮಾಧ್ಯಮಗಳು ಧರ್ಮ ದಂಗಲ್ ಎಂಬ ಪದ ಬಳಸುತ್ತಿವೆ. ಇದು ಎಷ್ಟು ಸರಿ? ಕಾನೂನಾತ್ಮಕ, ಸಂವಿಧಾನಾತ್ಮಕವಾಗಿ ಆದೇಶ ವಾಪಸ್ ಪಡೆಯಲು ಅವಕಾಶವಿದೆ. ಅದರಲ್ಲಿ ಸಿಎಂ ತಪ್ಪೇನಿದೆ? ವಿರೋಧ ಪಕ್ಷಗಳು ವಿರೋಧ ಮಾಡುತ್ತವೆ. ಮಾಡಲಿ. ನಾನೂ ಒಬ್ಬ ಹಿಂದೂ ಅಲ್ಲವಾ? ನಾನೇನು ಅದಕ್ಕೆ ವಿರೋಧ ಮಾಡುತ್ತಿಲ್ಲ.

ʻಮಾಧ್ಯಮದಲ್ಲೂ ಹಿಂದೂಗಳಿದ್ದಾರೆ ಅವರೂ ವಿರೋಧ ಮಾಡುತ್ತಾರಾ? ನಿಮ್ಮ ನಿಲುವು ಏನು ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದ ಅವರು, ಮುಸ್ಲಿಂ ತುಷ್ಟಿಕರಣ ವಿಚಾರಕ್ಕೆ ಪ್ರತಿಕ್ರೆಯಿಸಿ, ಮುಸ್ಲಿಂ ತುಷ್ಟಿಕರಣ ಎಂಬುದು ವಿರೋಧ ಪಕ್ಷಗಳ ದೃಷ್ಟಿಕೋನ ಆಗಿದೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ ಎಂದರೆ ಏನು? ಹಿಂದೂ, ಮುಸ್ಲಿಂ, ಸಿಖ್, ಬುದ್ಧ ಎಲ್ಲರನ್ನೂ ಒಂದೇ ರೀತಿ ನೋಡಿಕೊಳ್ಳುತ್ತೇವೆ ಎಂಬುದಲ್ಲವೇ? ಎಂದರು. ಹಿಜಾಬ್ ನಿಷೇಧ ವಾಪಸ್ ಸೇರಿದಂತೆ ಇತರೆ ನಿಯಮಗಳನ್ನು ಕಾನೂನಾತ್ಮಕವಾಗಿ ಪರಿಶೀಲನೆ ಮಾಡುತ್ತೇವೆ. ಸಂವಿಧಾನ ಬದ್ಧವಾಗಿ ಯಾವ ರೀತಿ ಇರಬೇಕ ಅಂತಿದೆಯೋ ಅದೇ ರೀತಿ ಮಾಡುತ್ತಾರೆ. ಅದೇ ರೀತಿಯಲ್ಲಿ ಮಾಡಲು ಸಿಎಂ ಪರಿಶೀಲಿಸುತ್ತಿದ್ದಾರೆ ಎಂದು ತಿಳಿಸಿದರು

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!