ಬೆಂಗಳೂರು : ಬಿಜೆಪಿ ಶಾಸಕ ಯತ್ನಾಳ್ ಅವರು ಬಿಜೆಪಿ ಅವಧಿಯಲ್ಲಿ ನಡೆದಿರುವ ಹಗರಣದ ಬಗ್ಗೆ ಮಾಡಿರುವ ಪ್ರಸ್ತಾಪದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿ ಅವರು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬ ಉದ್ದೇಶವಿದ್ದರೆ, ಶಾಸಕ ಯತ್ನಾಳ್ ಅವರು ಬಿಜೆಪಿ ಅವಧಿಯಲ್ಲಿ ನಡೆದಿರುವ ಕರೋನಾ ಹಗರಣದ ಬಗ್ಗೆ ದಾಖಲಾತಿಗಳನ್ನು ವಿಚಾರಣಾ ಆಯೋಗದ ಮುಂದಿರಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.