Breaking News CM ಸಿದ್ದರಾಮಯ್ಯ ಪರ ಅಶೋಕ್ ಬ್ಯಾಟಿಂಗ್.!State News

ಕೋಲಾರದಲ್ಲಿ ಸಂಸದ ಎಸ್.ಮುನಿಸ್ವಾಮಿ ನೇತೃತ್ವದಲ್ಲಿ ವಿಕಸಿತ ಭಾರತ ಸಂಕಲ್ಪಯಾತ್ರೆ

ಕೋಲಾರ : ನಗರದ ಆರಾಭಿಕೊತ್ತನೂರು ಗ್ರಾಮದಲ್ಲಿ ಖಾಸಗೀ ಕಲ್ಯಾಣ ಮಂಟಪದಲ್ಲಿ ಸಂಸದ ಎಸ್ ಮುನಿಸ್ವಾಮಿ ನೇತೃತ್ವದಲ್ಲಿ “ವಿಕಸಿತ ಭಾರತ ಸಂಕಲ್ಪ ಯಾತ್ರೆ” ಕಾರ್ಯಕ್ರಮ ಆಯೋಜಿಲಾಗಿದೆ.

ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ಸಚಿವ ಡಾ. ವೀರೇಂದ್ರ ಕುಮಾರ್ ಉಪಸ್ಥಿತರಿದ್ದರು. ಕೇಂದ್ರ ಸಚಿವರಿಗೆ ಹಾಗೂ ವಿಕಸಿಕ ಸಂಕಲ್ಪ ಯಾತ್ರೆಯ ವಾಹನಕ್ಕೆ ಕಳಶ ಹೊತ್ತ ಮಹಿಳೆಯರಿಂದ ಅದ್ದೂರಿಯಾಗಿ ಸ್ವಾಗತಿಸಿದ್ರು. ಕೇಂದ್ರ ಸರ್ಕಾರ ಯೋಜನೆಗಳನ್ನು ಜನರಿಗೆ ತಲುಪಿಸಲು ಕುರಿತು ಸಂಕಲ್ಪ ಯಾತ್ರೆಯನ್ನು ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಯನ್ನುದ್ದೇಶಿಸಿ ಮಾತನಾಡಿದ ಮೋದಿ ಭಾಷಣವನ್ನು ದೊಡ್ಡ ಪರದೆಯ ಮೂಲಕ ವೀಕ್ಷಣೆ ಮಾಡಲಾಯಿತು. ಕೇಂದ್ರ ಸಚಿವರಿಂದ ದೀಪ ಬೆಳಗಿಸುವ ಮೂಲಕ ವಿಕಸಿತ ಭಾರತ ಸಂಕಲ್ಪ ಯಾತ್ರೆ ಉದ್ಘಾಟಿಸಿದ್ದಾರೆ. ಕಾರ್ಯಕ್ರಮದಲ್ಲಿ ನಮ್ಮ ಸಂಕಲ್ಪ ವಿಕಸಿತ ಭಾರತ ಹಾಗೂ ಭಾರತವನ್ನು ಸ್ವಾವಲಂಬಿ ಹಾಗೂ ಅಭಿವೃದ್ದಿ ಮಾಡಿದ ಭಾರತ ಎಂದು ಪ್ರತಿಜ್ಞೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಎಸಿ ವೆಂಕಟಲಕ್ಷ್ಮಿ, ಸೇರಿದಂತೆ ವಿವಿದ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗಿಯಾಗಿದ್ದರು.

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!