ಕಲಬುರಗಿ : ಕರ್ನಾಟಕದಲ್ಲಿ ಮಳೆಯ ಕೊರತೆಯಿಂದಾಗಿ 195 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಸಚಿವ ಚಲುವರಾಯಸ್ವಾಮಿ (Minister Chaluvarayaswamy)ಘೋಷಣೆ ಮಾಡಿದ್ದಾರೆ.
ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಮಳೆಯ ಕೊರತೆ ಉಂಟಾಗಿದೆ. ಮಳೆಯ ಸಮಸ್ಯೆಯಿಂದ ಬೆಳೆಹಾನಿಯಾಗುತ್ತಿದ್ದು, ಬೆಳೆಗೆ ಪೂರಕವಾದ ಮಳೆಯಿಲ್ಲದೇ ರೈತರ ಆತ್ಮಹತ್ಯೆ ಪ್ರಕರಣ ಹೆಚ್ಚಾಗುತ್ತಿದೆ.
ರಾಜ್ಯದೆಲ್ಲೆಡೆ ಮಳೆ ಕೊರತೆಯಾಗಿದೆ. ಕರ್ನಾಟಕ 195 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಕಲಬುರಗಿಯಲ್ಲಿ ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ ಘೋಷಣೆ ಮಾಡಿದ್ದಾರೆ.
ಅ.10ರಂದು ಕೇಂದ್ರ ಅಧಿಕಾರಿಗಳ ತಂಡ ರಾಜ್ಯಕ್ಕೆ ಭೇಟಿ ನೀಡುತ್ತೆ. ಅಧಿಕಾರಿಗಳ 3 ತಂಡ ರಾಜ್ಯಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಲಿದ್ದಾರೆ. ಬೆಳೆ ಸರ್ವೆ ನಡೆಸಲು ನಮ್ಮ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಅ.10ರೊಳಗೆ ಸರ್ವೆ ಕಾರ್ಯ ಮುಗಿಸಲು ಕಟ್ಟುನಿಟ್ಟಾಗಿ ಸೂಚನೆ ನೀಡಲಾಗಿದೆ.