ಮಂಗಳೂರು : ಕುಡಿದ ಮತ್ತಿನಲ್ಲಿ ಬಾರ್ ನಲ್ಲಿ ಯುವಕರ ಮಧ್ಯೆ ಮಾರಾಮಾರಿ ಆಗಿರುವಂತಹ ಘಟನೆ ಮಂಗಳೂರಿನ ಕೊಟ್ಟಾರ ಬಳಿಯ ಕೋಸ್ಟಲ್ ಬಾರ್ ನಲ್ಲಿ ನಡೆದಿದೆ.
ಕ್ಷುಲ್ಲಕ ವಿಚಾರಕ್ಕೆ ಗಲಾಟೆ ನಡೆದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಬಳಿಕ ಹೊಡೆದಾಟ ಉಲ್ಬಣಗೊಂಡು ಬಿಯರ್ ಬಾಟಲಿ, ಸೋಡಾ ಬಾಟಲಿಯಿಂದ ಹಲ್ಲೆ ಮಾಡಲಾಗಿದೆ. ಅಶೋಕ್ ಪೂಜಾರಿ ಎಂಬಾತನ ಮೇಲೆ ರಕ್ತ ಚಿಮ್ಮುವಂತೆ ರೀತು ಮತ್ತು ವಿಶ್ವ ಹಲ್ಲೆ ಮಾಡಿದ್ದಾರೆ.
ಮೊದಲಿಗೆ ಅನೂಪ್ ಮತ್ತು ರೀತು ಮಧ್ಯೆ ಮಾತಿನ ಚಕಮಕಿ ನಡೆದಾಗ ಅಶೋಕ್ ಮಧ್ಯ ಪ್ರವೇಶಿಸಿದ್ದ. ಈ ವೇಳೆ ರೀತು ಕೌಂಟರ್ ನಲ್ಲಿದ್ದ ಬಿಯರ್ ಬಾಟಲಿ ತೆಗೆದು ಅಶೋಕ್ ತಲೆಗೆ ಹೊಡೆದಿದ್ದಾನೆ. ಇದೇ ವೇಳೆ ಕೊಟ್ಟಾರ ಚೌಕಿಯ ವಿಶ್ವ ಎಂಬವನೂ ಕೂಡಾ ಸೋಡಾ ಬಾಟಲಿಯಿಂದ ಹಲ್ಲೆ ಮಾಡಿದ್ದಾನೆ.
ಅಶೋಕ್ ನ ತಲೆ, ಮುಖದ ಭಾಗಗಳಿಗೆ ಬಾಟಲಿ, ಚೂರಿಯಿಂದ ಇರಿದು ಕೊಲೆಯತ್ನ ನಡೆದಿದೆ. ಈ ವೇಳೆ ತಲೆಯಿಂದ ರಕ್ತ ಹರಿದಿದ್ದು, ಮೂಗಿನ ಮೂಳೆ ಮುರಿತಗೊಂಡಿದೆ. ಪರಿಣಾಮ ತೀವ್ರ ರಕ್ತಸ್ರಾವದಿಂದ ಅಶೋಕ್ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಇನ್ನು ಈ ಎಲ್ಲಾ ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನು ಘಟನೆ ಬಗ್ಗೆ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.